ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ ದಿಟ್ಟ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಈ ಹಿನ್ನೆಲೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಜಿಲ್ಲಾಧಿಕಾರಿಗಳನ್ನ ಅಭಿನಂದಿಸುವ ಮೂಲಕ ಭೂಗಳ್ಳರಿಗೆ ಎಚ್ಚರಿಕೆ ನೀಡುವಂತೆ ಮನವಿ ಮಾಡಿದರು.
ದೊಡ್ಡಬಳ್ಳಾಪುರ ನಗರದಂಚಿನ ಅರೇಹಳ್ಳಿಗುಡ್ಡದಹಳ್ಳಿ ಸರ್ವೆ ನಂಬರ್ 57ರ ಸರ್ಕಾರಿ ಗೋಮಾಳದಲ್ಲಿ 6 ಎಕರೆ ಜಾಗವನ್ನ ಅಕ್ರಮವಾಗಿ ಮಂಜೂರು ಮಾಡಲಾಗಿತ್ತು. ಕಾನೂನುಬಾಹಿರವಾಗಿ ಮಂಜೂರಾತಿಯನ್ನ ವಜಾ ಮಾಡುವಂತೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಹೋರಾಟ ಮಾಡಿತ್ತು. ಹೋರಾಟದ ಫಲ ಕಾನೂನುಬಾಹಿರ ಮಂಜೂರಾತಿ ವಜಾ ಆಗಿದೆ, ಜಿಲ್ಲಾಧಿಕಾರಿಗಳಾದ ಬಸವರಾಜು ಸೆಪ್ಟೆಂಬರ್ 2ರಂದು ಹೊರಡಿಸಿದ ಆದೇಶದಲ್ಲಿ ಸುಮಾರು 40 ಕೋಟಿ ಮೌಲ್ಯದ 6 ಎಕರೆ ಜಾಗವನ್ನ ಸರ್ಕಾರಿ ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿಗಳ ದಿಟ್ಟ ಕ್ರಮ, ಭೂಗಳ್ಳರಿಗೆ ಎಚ್ಚರಿಕೆ ಸಂದೇಶವನ್ನ ರವಾನೆ ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಕಾನೂನುಬಾಹಿರ ಮಂಜೂರಾತಿ ವಜಾ ಮಾಡುವಂತೆ ಹೋರಾಟ ಮಾಡಿದ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಯು.ಮುನಿರಾಜು ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳನ್ನ ಅಭಿನಂದಿಸಿದರು.
ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಯು.ಮುನಿರಾಜು, ಸರ್ಕಾರಿ ಗೋಮಾಳ ಜಾಗವನ್ನ ಕಾನೂನುಬಾಹಿರವಾಗಿ ನಾಲ್ಕು ಮಂದಿಗೆ ಮಂಜೂರಾತಿ ಮಾಡಲಾಗಿತ್ತು, ಇದರ ವಿರುದ್ಧ ನಮ್ಮ ಸಂಘಟನೆ ಬೀದಿಗಿಳಿದು ಹೋರಾಟ ಮಾಡಿತ್ತು, ಮಂಜೂರಾತಿಯನ್ನ ವಜಾ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಜಿಲ್ಲಾಧಿಕಾರಿಗಳು ಯಾವುದಕ್ಕೂ ಅಂಜದೆ ಬಗ್ಗದೆ ಜಾಗವನ್ನ ಸರ್ಕಾರಿ ವಶಕ್ಕೆ ಪಡೆದಿದ್ದಾರೆ, ಅವರಿಗೆ ನಾವು ಅಭಿನಂದನೆ ಸಲ್ಲಿಸಿದ್ದೇವೆ.
ಇದೇ ವೇಳೆ ನಾವು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದು, ಕಾನೂನುಬಾಹಿರವಾಗಿ ಭೂ ಮಂಜೂರಾತಿ ಮಾಡಿಸಿಕೊಂಡ ನಾಲ್ವರ ವಿರುದ್ಧ ಕಾನೂನು ಕ್ರಮ ಜರುಗಿಸ ಬೇಕು, ಯಾವ ಆಧಾರ ಮೇಲೆ ಅಧಿಕಾರಿಗಳು ಭೂ ಮಂಜೂರಾತಿ ಮಾಡಿದರು, ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳ ಬೇಕೆಂಕು. ತಾಲೂಕಿನಲ್ಲಿ ರಾಜಕಾಲುವೆ, ನೀರುಗಾಲುವೆ, ಸ್ಮಶಾನ, ಸರ್ಕಾರಿ ಗೋಮಾಳವನ್ನ ಒತ್ತುವರಿ ಮಾಡಲಾಗಿದೆ ಇವರು ವಿರುದ್ಧ ಕ್ರಮ ತೆಗೆದುಕೊಳ್ಳ ಬೇಕೆಂದು ಆಗ್ರಹಿಸಿದರು.
ನಮ್ಮ ಹೋರಾಟಕ್ಕೆ ಬೆಂಬಲ ನೀಡಿದ ಪ್ರಜಾ ವಿಮೋಚನ ಚಳವಳಿ, ಜನಧ್ವನಿ ವೇದಿಕೆ, ಭೂಮಿ ವಸತಿ ವಂಚಿತರ ಹೋರಾಟ ಸಮಿತಿ, ರೈತಪರ ಸಂಘಟನೆ, ಕನ್ನಡಪರ ಸಂಘಟನೆಗಳು, ವಕೀಲರು ಮತ್ತು ಮಾಧ್ಯಮದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…
ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…