Categories: ಗದಗ

40% ಭ್ರಷ್ಟಾಚಾರ ಪ್ರಕರಣದ ತನಿಖೆ- ಆರೋಪಗಳು ಸಾಬೀತಾದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ

ಕ.ರಾ.ರ.ಸಾ ನಿಗಮದಲ್ಲಿ ಸಾಕಷ್ಟು ಬಸ್ ಕೆಟ್ಟು ನಿಂತಿದ್ದು ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ ಹಾಕಲು ಅಧಿಕಾರಿಗಳು ಹಣ ಕೇಳುತ್ತಾರೆ ಎಂದು ಕೆಲ ಚಾಲಕರಿಂದ ದೂರು ಕೇಳಿಬರುತ್ತಿದ್ದು, ಡ್ಯೂಟಿ ಹಾಕಲು ಲಂಚ ಕೇಳಿದ ಪ್ರಕರಣವನ್ನೂ ತನಿಖೆ ಮಾಡಿಸಲಾಗುವುದು. ಈಗಾಗಲೇ ನಾವು ಹಿಂದಿನ ಸರ್ಕಾರದ 40% ಭ್ರಷ್ಟಾಚಾರ ಪ್ರಕರಣವನ್ನು ತನಿಖೆ ಮಾಡಿಸುತ್ತಿದ್ದೇವೆ. ಆರೋಪಗಳು ಸಾಬೀತಾದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾಂತರಾಜು ವರದಿ ಇನ್ನೂ ಸಲ್ಲಿಸಿಲ್ಲವಾದ್ದರಿಂದ ಸ್ವೀಕಾರ ಮಾಡುವುದು ಹೇಗೆ? ವರದಿ ಕೊಟ್ಟ ಮೇಲೆ ಸ್ವೀಕಾರ ಮಾಡುವ ಪ್ರಶ್ನೆ ಉದ್ಭವವಾಗುತ್ತದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ವರದಿ ಕೊಟ್ಟಿಲ್ಲ. ಕೊಡಲು ಬಂದಾಗ ವಿಚಾರ ಮಾಡುತ್ತೇವೆ. ವರದಿ ವೈಜ್ಞಾನಿಕವಲ್ಲ ಎಂದು ಕೆಲವರು ವಿಚಾರ ಮಾಡುತ್ತಿದ್ದು, ವರದಿ ಬರದೆ, ಏನಿದೆ ಎಂದು ತಿಳಿಯದೇ ಊಹಾಪೋಹದ ಮೇಲೆ ನಿರ್ಧಾರ ಮಾಡುತ್ತಿದ್ದಾರೆ. ಮೊದಲು ವರದಿ ಬರಲಿ ನೋಡೋಣ ಎಂದು ಹೇಳಿದರು.

ಶಕ್ತಿ ಯೋಜನೆಗೆ ಯೋಜನೆಗೆ ಎಷ್ಟು ಹಣ ಖರ್ಚಾಗುತ್ತದೆಯೋ ಅಷ್ಟು ಹಣ ಒದಗಿಸಲಾಗುವುದು. ಈ ಯೋಜನೆಗೆ ಪ್ರತಿ ವರ್ಷ ವೆಚ್ಚವಾಗುವ ಹಣವನ್ನು ಕೆ.ಎಸ್.ಆರ್.ಟಿ. ಸಿ ಗೆ ಸರ್ಕಾರದಿಂದ ತುಂಬಿ ಕೊಡಲಾಗುವುದು. ಬಸ್ಸುಗಳ ದುರಸ್ತಿ ಹಾಗೂ ಹೊಸ ಬಸ್ಸುಗಳ ಖರೀದಿಯೂ ಆಗಲಿದೆ. ರಿಪೇರಿಗೆ ಅನುದಾನವನ್ನು ಒದಗಿಸಲಾಗಿದೆ. ಅನುದಾನವಿಲ್ಲ ಎಂದಿರುವ ಅಧಿಕಾರಿಗಳ ಹೆಸರು ನೀಡಿದರೆ ಪರಿಶೀಲನೆ ನಡೆಸಲಾಗುವುದು. ನಮ್ಮ ಸರ್ಕಾರದಲ್ಲಿ ಘೋಷಿಸಿರುವ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ. ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದರು.

ನವೆಂಬರ್ ಅಂತ್ಯದವರೆಗೆ ಹಿಂದಿನ ಸರ್ಕಾರ  70,814 ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಖರ್ಚು ಮಾಡಿತ್ತು. ನಮ್ಮ ಸರ್ಕಾರ 73,928 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಹಣವನ್ನು ಖರ್ಚು ಮಾಡಿಲ್ಲ ಎನ್ನುವುದು ಸುಳ್ಳು. 3,000 ಕೋಟಿ ರೂ.ಗಳಷ್ಟು ಮೊತ್ತವನ್ನು ಹೆಚ್ಚು ವೆಚ್ಚ ಮಾಡಿದ್ದೇವೆ. ನಾವು ಸರ್ಕಾರ ರೂಪಿಸಿದ್ದು ಮೇ 20 ಕ್ಕೆ, ಬಜೆಟ್ ಮಂಡಿಸಿದ್ದು ಜುಲೈನಲ್ಲಿ, ಅದು ಜಾರಿಯಾಗಿದ್ದು ಆಗಸ್ಟ್ 1 ರಿಂದ. 4 ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದು, 5 ನೇ ಗ್ಯಾರಂಟಿ ಜನವರಿಯಲ್ಲಿ ಪ್ರಾರಂಭವಾಗಲಿದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದು ತಿಳಿಸಿದರು.

ಇಡೀ ದೇಶದಲ್ಲಿ ಕೊರೊನಾ ಹೊಸ ತಳಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರಿಗೆ ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.

ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ಧ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರಿದ್ದಾರೆ. ಹಾಗಾಗಿ ಬೇರೆ ಪ್ರಶ್ನೆ ಉದ್ಭವಿಸದು ಎಂದು ಹೇಳಿದರು.

ಕ್ಯಾಶ್ ಕಾರ್ಡ್  ಬ್ಯಾಂಕ್ ಸೊಸೈಟಿಗಳಲ್ಲಿ ರೈತರಿಗೆ ನೀಡಿರುವ ಸಾಲದ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡಲಾಗುವುದು ಎಂದರು.

ಉನ್ನತ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆಗಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಒಂದು ಸೂತ್ರ ರೂಪಿಸುತ್ತಿವೆ. ಈ ಸಂಬಂಧ ಸಭೆ ನಡೆಸಿದ ನಂತರ ಪರಿಹಾರ ಸೂತ್ರವನ್ನು ಸರ್ಕಾರಕ್ಕೆ ನೀಡುತ್ತಾರೆ. ತದನಂತರ ಸರ್ಕಾರ ಪರಿಶೀಲನೆ ನಡೆಸಲಿದೆ. ಈ ಕೆಲಸವನ್ನು ತ್ವರಿತವಾಗಿ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

3 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

9 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

10 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago