Categories: ಗದಗ

40% ಭ್ರಷ್ಟಾಚಾರ ಪ್ರಕರಣದ ತನಿಖೆ- ಆರೋಪಗಳು ಸಾಬೀತಾದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ

ಕ.ರಾ.ರ.ಸಾ ನಿಗಮದಲ್ಲಿ ಸಾಕಷ್ಟು ಬಸ್ ಕೆಟ್ಟು ನಿಂತಿದ್ದು ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ ಹಾಕಲು ಅಧಿಕಾರಿಗಳು ಹಣ ಕೇಳುತ್ತಾರೆ ಎಂದು ಕೆಲ ಚಾಲಕರಿಂದ ದೂರು ಕೇಳಿಬರುತ್ತಿದ್ದು, ಡ್ಯೂಟಿ ಹಾಕಲು ಲಂಚ ಕೇಳಿದ ಪ್ರಕರಣವನ್ನೂ ತನಿಖೆ ಮಾಡಿಸಲಾಗುವುದು. ಈಗಾಗಲೇ ನಾವು ಹಿಂದಿನ ಸರ್ಕಾರದ 40% ಭ್ರಷ್ಟಾಚಾರ ಪ್ರಕರಣವನ್ನು ತನಿಖೆ ಮಾಡಿಸುತ್ತಿದ್ದೇವೆ. ಆರೋಪಗಳು ಸಾಬೀತಾದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾಂತರಾಜು ವರದಿ ಇನ್ನೂ ಸಲ್ಲಿಸಿಲ್ಲವಾದ್ದರಿಂದ ಸ್ವೀಕಾರ ಮಾಡುವುದು ಹೇಗೆ? ವರದಿ ಕೊಟ್ಟ ಮೇಲೆ ಸ್ವೀಕಾರ ಮಾಡುವ ಪ್ರಶ್ನೆ ಉದ್ಭವವಾಗುತ್ತದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ವರದಿ ಕೊಟ್ಟಿಲ್ಲ. ಕೊಡಲು ಬಂದಾಗ ವಿಚಾರ ಮಾಡುತ್ತೇವೆ. ವರದಿ ವೈಜ್ಞಾನಿಕವಲ್ಲ ಎಂದು ಕೆಲವರು ವಿಚಾರ ಮಾಡುತ್ತಿದ್ದು, ವರದಿ ಬರದೆ, ಏನಿದೆ ಎಂದು ತಿಳಿಯದೇ ಊಹಾಪೋಹದ ಮೇಲೆ ನಿರ್ಧಾರ ಮಾಡುತ್ತಿದ್ದಾರೆ. ಮೊದಲು ವರದಿ ಬರಲಿ ನೋಡೋಣ ಎಂದು ಹೇಳಿದರು.

ಶಕ್ತಿ ಯೋಜನೆಗೆ ಯೋಜನೆಗೆ ಎಷ್ಟು ಹಣ ಖರ್ಚಾಗುತ್ತದೆಯೋ ಅಷ್ಟು ಹಣ ಒದಗಿಸಲಾಗುವುದು. ಈ ಯೋಜನೆಗೆ ಪ್ರತಿ ವರ್ಷ ವೆಚ್ಚವಾಗುವ ಹಣವನ್ನು ಕೆ.ಎಸ್.ಆರ್.ಟಿ. ಸಿ ಗೆ ಸರ್ಕಾರದಿಂದ ತುಂಬಿ ಕೊಡಲಾಗುವುದು. ಬಸ್ಸುಗಳ ದುರಸ್ತಿ ಹಾಗೂ ಹೊಸ ಬಸ್ಸುಗಳ ಖರೀದಿಯೂ ಆಗಲಿದೆ. ರಿಪೇರಿಗೆ ಅನುದಾನವನ್ನು ಒದಗಿಸಲಾಗಿದೆ. ಅನುದಾನವಿಲ್ಲ ಎಂದಿರುವ ಅಧಿಕಾರಿಗಳ ಹೆಸರು ನೀಡಿದರೆ ಪರಿಶೀಲನೆ ನಡೆಸಲಾಗುವುದು. ನಮ್ಮ ಸರ್ಕಾರದಲ್ಲಿ ಘೋಷಿಸಿರುವ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ. ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದರು.

ನವೆಂಬರ್ ಅಂತ್ಯದವರೆಗೆ ಹಿಂದಿನ ಸರ್ಕಾರ  70,814 ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಖರ್ಚು ಮಾಡಿತ್ತು. ನಮ್ಮ ಸರ್ಕಾರ 73,928 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಹಣವನ್ನು ಖರ್ಚು ಮಾಡಿಲ್ಲ ಎನ್ನುವುದು ಸುಳ್ಳು. 3,000 ಕೋಟಿ ರೂ.ಗಳಷ್ಟು ಮೊತ್ತವನ್ನು ಹೆಚ್ಚು ವೆಚ್ಚ ಮಾಡಿದ್ದೇವೆ. ನಾವು ಸರ್ಕಾರ ರೂಪಿಸಿದ್ದು ಮೇ 20 ಕ್ಕೆ, ಬಜೆಟ್ ಮಂಡಿಸಿದ್ದು ಜುಲೈನಲ್ಲಿ, ಅದು ಜಾರಿಯಾಗಿದ್ದು ಆಗಸ್ಟ್ 1 ರಿಂದ. 4 ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದು, 5 ನೇ ಗ್ಯಾರಂಟಿ ಜನವರಿಯಲ್ಲಿ ಪ್ರಾರಂಭವಾಗಲಿದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದು ತಿಳಿಸಿದರು.

ಇಡೀ ದೇಶದಲ್ಲಿ ಕೊರೊನಾ ಹೊಸ ತಳಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರಿಗೆ ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.

ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ಧ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರಿದ್ದಾರೆ. ಹಾಗಾಗಿ ಬೇರೆ ಪ್ರಶ್ನೆ ಉದ್ಭವಿಸದು ಎಂದು ಹೇಳಿದರು.

ಕ್ಯಾಶ್ ಕಾರ್ಡ್  ಬ್ಯಾಂಕ್ ಸೊಸೈಟಿಗಳಲ್ಲಿ ರೈತರಿಗೆ ನೀಡಿರುವ ಸಾಲದ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡಲಾಗುವುದು ಎಂದರು.

ಉನ್ನತ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆಗಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಒಂದು ಸೂತ್ರ ರೂಪಿಸುತ್ತಿವೆ. ಈ ಸಂಬಂಧ ಸಭೆ ನಡೆಸಿದ ನಂತರ ಪರಿಹಾರ ಸೂತ್ರವನ್ನು ಸರ್ಕಾರಕ್ಕೆ ನೀಡುತ್ತಾರೆ. ತದನಂತರ ಸರ್ಕಾರ ಪರಿಶೀಲನೆ ನಡೆಸಲಿದೆ. ಈ ಕೆಲಸವನ್ನು ತ್ವರಿತವಾಗಿ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

23 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago