40 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ ರೈತನಿಗೆ ಬಿಟ್ಟು, ಬೇರೊಬ್ಬ ವ್ಯಕ್ತಿಗೆ ಭೂಮಿ ಮಂಜೂರು

ದೊಡ್ಡಬಳ್ಳಾಪುರ : ಗಿಡಗಂಟೆಗಳಿಂದ ಅವರಿಸಿದ್ದ ಗುಡ್ಡ ಪ್ರದೇಶ, ಗಿಡ ಕಿತ್ತು ಭೂಮಿ ಸಮತಟ್ಟು ಮಾಡಿದ ರೈತ ಕಳೆದ 40 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ, ಭೂ ಮಂಜೂರಾತಿಯ ನಿರೀಕ್ಷೆಯಲ್ಲಿದ್ದ ಸಾಗುವಳಿದಾರನ ಜಮೀನು ಬೇರೊಬ್ಬ ವ್ಯಕ್ತಿಗೆ ಮಂಜೂರಾಗಿದೆ, 40 ವರ್ಷಗಳ ಶ್ರಮ ಹಾಕಿದ ಭೂಮಿಯನ್ನ ಬೀಡುವಂತೆ ದಬ್ಬಾಳಿಕೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ರೈತ ಮುತ್ತುರಾಜ್ ಆರೋಪಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ತಂಬೇನಹಳ್ಳಿಯ ಸರ್ವೆ ನಂಬರ್ 15ರ ಸರ್ಕಾರಿ ಗೋಮಾಳದಲ್ಲಿನ 2 ಎಕರೆ ಜಾಗದಲ್ಲಿ ರೈತ ಮುತ್ತುರಾಜ್ ಸಾಗುವಳಿ ಮಾಡುತ್ತಿದ್ದಾರೆ. ಅವರ ತಂದೆ ತಾಡಪ್ಪ ಕಳೆದ 40 ವರ್ಷಗಳಿಂದ ಈ ಜಾಗದಲ್ಲಿ ಬೇಸಾಯ ಮಾಡುತ್ತಿದ್ದಾರೆ, ಮೊದಲಿಗೆ ಗುಡಿಸಿಲಲ್ಲಿ ವಾಸವಾಗಿದ್ದ ಅವರು ಭೂಮಿಯನ್ನ ಸಾಗುವಳಿ ಭೂಮಿಯನ್ನಾಗಿ ಮಾಡಿದ್ದಾರೆ, ಬೇಸಾಯದ ಜೊತೆಯಲ್ಲಿ ಹಲಸಿನ ಮರಗಳನ್ನ ಬೆಳೆದಿದ್ದಾರೆ, ಇತ್ತಿಚೇಗೆ ಸಾಧರಣ ಮನೆಯನ್ನ ಕಟ್ಟಿಕೊಂಡು ವಾಸವಾಗಿದ್ದಾರೆ, ರಾಗಿ, ಜೋಳ, ಅಲಸಂದಿ, ಅವರೆ, ತೊಗರಿ ಬೆಳೆದು ಜೀವನ ಮಾಡುತ್ತಿದ್ದಾರೆ, ಭೂ ಮಂಜೂರಾತಿಗಾಗಿ ತಹಶೀಲ್ದಾರ್ ಕಛೇರಿಗೆ ಅರ್ಜಿಯನ್ನ ಸಲ್ಲಿಸಿದರು, ಇಂದಲ್ಲಾ ನಾಳೆ ತಮ್ಮ ಹೆಸರಿಗೆ ಜಮೀನು ಮಂಜೂರಾತಿಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಇದೇ ಜಾಗ ಚೌಡಮ್ಮ ಎಂಬುವರ ಹೆಸರಿಗೆ ಮಂಜೂರಾತಿಯಾಗಿದೆ, ಹೊಲ ಮನೆ ಬಿಟ್ಟು ಹೋಗುವಂತೆ ಮುತ್ತುರಾಜ್ ಕುಟುಂಬ ಮೇಲೆ ದೌರ್ಜನ್ಯ ಮಾಡಲಾಗುತ್ತಿದೆ ಎಂಬ ಆರೋಪ ಮಾಡಲಾಗಿದೆ.

ಮಾಧ್ಯಮದೊಂದಿಗೆ ಮಾತನಾಡಿದ ಮುತ್ತುರಾಜ್, ಕಳೆದ 40 ವರ್ಷಗಳಿಂದ ನಾವು ಈ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದೇವೆ, ರೈತನ ಹೆಸರಿಗೆ ಖಾತೆ ಮಾಡುವ ಮುನ್ನ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಮಹಜರ್ ಮಾಡಿ, ಜಮೀನು ಅಕ್ಕಪಕ್ಕ ರೈತನ ಸಹಿ ಪಡೆದು, ನೈಜ ವರದಿಯ ಮೇಲೆ ಸಾಗುವಳಿ ಚೀಟಿ ಮತ್ತು ರೈತನ ಹೆಸರಿಗೆ ಪಹಣಿ ಮಾಡ ಬೇಕು. ಆದರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೆ, ಸ್ದಾಧೀನದಲ್ಲಿರುವ ನಮ್ಮನ್ನು ಕೇಳದೆ, ನಾವು ಸಾಗುವಳಿ ಮಾಡುತ್ತಿರುವ ಜಮೀನನ್ನ ಚೌಡಮ್ಮರವರಿಗೆ ಮಂಜೂರು ಮಾಡಿ ನಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸ್ಥಳೀಯ ರೈತ ಮುನೇಗೌಡ ಮಾತನಾಡಿ, ಮುತ್ತುರಾಜ್ ಕುಟುಂಬ ಕಳೆದ 40 ವರ್ಷಗಳಿಂದ ಈ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದಾರೆ, ನಾವೇಲ್ಲ ಭೂ ಮಂಜೂರಾತಿಗಾಗಿ ತಹಶೀಲ್ದಾರ್ ಕಛೇರಿಗೆ ಅರ್ಜಿಯನ್ನ ಹಾಕಿದ್ದೇವು, ಇಲ್ಲಿಯವರೆಗೂ ನಮಗೆ ಸಾಗುವಳಿ ಚೀಟಿ ಸಹ ನೀಡಿಲ್ಲ, ಕಛೇರಿಯಿಂದ ಕಛೇರಿಗೆ ಅಲೆಸುತ್ತಿದ್ದಾರೆ, ಹಣ ನೀಡುವ ರೈತರಿಗೆ ಸಾಗುವಳಿ ಚೀಟಿ, ಪಹಣೆ ಮಾಡಲಾಗುತ್ತಿದೆ ಎಂದರು.

ಚೌಡಮ್ಮರವರ ಅಳಿಯ ರಾಜಣ್ಣ ಮಾತನಾಡಿ, ಚೌಡಮ್ಮ ಭೂ ಮಂಜೂರಾತಿ ಅರ್ಜಿ ಹಾಕಿದ್ದು, ಆದರ ಆಧಾರ ಮೇಲೆ ಭೂ ಮಂಜೂರಾತಿಯಾಗಿದೆ, ಭೂ ಮಂಜೂರಾತಿ ಮುನ್ನ ಚೌಡಮ್ಮರವರ ಜಮೀನು ಯಾವುದೆಂದ್ದು ಗೊತ್ತಿರಲಿಲ್ಲ, ಮಂಜೂರಾತಿಯಾದ ನಂತರ ಚೌಡಮ್ಮ ಜಾಗ ಇದೆ ಎಂದು ತಿಳಿದು ಬಂದಿದೆ, ಜಾಗ ಆದಲಿ ಬದಲಿಯಾಗಿದೆ, ಆ ಕಾರಣಕ್ಕೆ ಜಮೀನು ಬಿಡುವಂತೆ ನಾವು ಕೇಳುತ್ತಿರುವುದ್ದಾಗಿ ಹೇಳಿದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

8 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

12 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

12 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

20 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago