40 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ ರೈತನಿಗೆ ಬಿಟ್ಟು, ಬೇರೊಬ್ಬ ವ್ಯಕ್ತಿಗೆ ಭೂಮಿ ಮಂಜೂರು

ದೊಡ್ಡಬಳ್ಳಾಪುರ : ಗಿಡಗಂಟೆಗಳಿಂದ ಅವರಿಸಿದ್ದ ಗುಡ್ಡ ಪ್ರದೇಶ, ಗಿಡ ಕಿತ್ತು ಭೂಮಿ ಸಮತಟ್ಟು ಮಾಡಿದ ರೈತ ಕಳೆದ 40 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ, ಭೂ ಮಂಜೂರಾತಿಯ ನಿರೀಕ್ಷೆಯಲ್ಲಿದ್ದ ಸಾಗುವಳಿದಾರನ ಜಮೀನು ಬೇರೊಬ್ಬ ವ್ಯಕ್ತಿಗೆ ಮಂಜೂರಾಗಿದೆ, 40 ವರ್ಷಗಳ ಶ್ರಮ ಹಾಕಿದ ಭೂಮಿಯನ್ನ ಬೀಡುವಂತೆ ದಬ್ಬಾಳಿಕೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ರೈತ ಮುತ್ತುರಾಜ್ ಆರೋಪಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ತಂಬೇನಹಳ್ಳಿಯ ಸರ್ವೆ ನಂಬರ್ 15ರ ಸರ್ಕಾರಿ ಗೋಮಾಳದಲ್ಲಿನ 2 ಎಕರೆ ಜಾಗದಲ್ಲಿ ರೈತ ಮುತ್ತುರಾಜ್ ಸಾಗುವಳಿ ಮಾಡುತ್ತಿದ್ದಾರೆ. ಅವರ ತಂದೆ ತಾಡಪ್ಪ ಕಳೆದ 40 ವರ್ಷಗಳಿಂದ ಈ ಜಾಗದಲ್ಲಿ ಬೇಸಾಯ ಮಾಡುತ್ತಿದ್ದಾರೆ, ಮೊದಲಿಗೆ ಗುಡಿಸಿಲಲ್ಲಿ ವಾಸವಾಗಿದ್ದ ಅವರು ಭೂಮಿಯನ್ನ ಸಾಗುವಳಿ ಭೂಮಿಯನ್ನಾಗಿ ಮಾಡಿದ್ದಾರೆ, ಬೇಸಾಯದ ಜೊತೆಯಲ್ಲಿ ಹಲಸಿನ ಮರಗಳನ್ನ ಬೆಳೆದಿದ್ದಾರೆ, ಇತ್ತಿಚೇಗೆ ಸಾಧರಣ ಮನೆಯನ್ನ ಕಟ್ಟಿಕೊಂಡು ವಾಸವಾಗಿದ್ದಾರೆ, ರಾಗಿ, ಜೋಳ, ಅಲಸಂದಿ, ಅವರೆ, ತೊಗರಿ ಬೆಳೆದು ಜೀವನ ಮಾಡುತ್ತಿದ್ದಾರೆ, ಭೂ ಮಂಜೂರಾತಿಗಾಗಿ ತಹಶೀಲ್ದಾರ್ ಕಛೇರಿಗೆ ಅರ್ಜಿಯನ್ನ ಸಲ್ಲಿಸಿದರು, ಇಂದಲ್ಲಾ ನಾಳೆ ತಮ್ಮ ಹೆಸರಿಗೆ ಜಮೀನು ಮಂಜೂರಾತಿಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಇದೇ ಜಾಗ ಚೌಡಮ್ಮ ಎಂಬುವರ ಹೆಸರಿಗೆ ಮಂಜೂರಾತಿಯಾಗಿದೆ, ಹೊಲ ಮನೆ ಬಿಟ್ಟು ಹೋಗುವಂತೆ ಮುತ್ತುರಾಜ್ ಕುಟುಂಬ ಮೇಲೆ ದೌರ್ಜನ್ಯ ಮಾಡಲಾಗುತ್ತಿದೆ ಎಂಬ ಆರೋಪ ಮಾಡಲಾಗಿದೆ.

ಮಾಧ್ಯಮದೊಂದಿಗೆ ಮಾತನಾಡಿದ ಮುತ್ತುರಾಜ್, ಕಳೆದ 40 ವರ್ಷಗಳಿಂದ ನಾವು ಈ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದೇವೆ, ರೈತನ ಹೆಸರಿಗೆ ಖಾತೆ ಮಾಡುವ ಮುನ್ನ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಮಹಜರ್ ಮಾಡಿ, ಜಮೀನು ಅಕ್ಕಪಕ್ಕ ರೈತನ ಸಹಿ ಪಡೆದು, ನೈಜ ವರದಿಯ ಮೇಲೆ ಸಾಗುವಳಿ ಚೀಟಿ ಮತ್ತು ರೈತನ ಹೆಸರಿಗೆ ಪಹಣಿ ಮಾಡ ಬೇಕು. ಆದರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೆ, ಸ್ದಾಧೀನದಲ್ಲಿರುವ ನಮ್ಮನ್ನು ಕೇಳದೆ, ನಾವು ಸಾಗುವಳಿ ಮಾಡುತ್ತಿರುವ ಜಮೀನನ್ನ ಚೌಡಮ್ಮರವರಿಗೆ ಮಂಜೂರು ಮಾಡಿ ನಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸ್ಥಳೀಯ ರೈತ ಮುನೇಗೌಡ ಮಾತನಾಡಿ, ಮುತ್ತುರಾಜ್ ಕುಟುಂಬ ಕಳೆದ 40 ವರ್ಷಗಳಿಂದ ಈ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದಾರೆ, ನಾವೇಲ್ಲ ಭೂ ಮಂಜೂರಾತಿಗಾಗಿ ತಹಶೀಲ್ದಾರ್ ಕಛೇರಿಗೆ ಅರ್ಜಿಯನ್ನ ಹಾಕಿದ್ದೇವು, ಇಲ್ಲಿಯವರೆಗೂ ನಮಗೆ ಸಾಗುವಳಿ ಚೀಟಿ ಸಹ ನೀಡಿಲ್ಲ, ಕಛೇರಿಯಿಂದ ಕಛೇರಿಗೆ ಅಲೆಸುತ್ತಿದ್ದಾರೆ, ಹಣ ನೀಡುವ ರೈತರಿಗೆ ಸಾಗುವಳಿ ಚೀಟಿ, ಪಹಣೆ ಮಾಡಲಾಗುತ್ತಿದೆ ಎಂದರು.

ಚೌಡಮ್ಮರವರ ಅಳಿಯ ರಾಜಣ್ಣ ಮಾತನಾಡಿ, ಚೌಡಮ್ಮ ಭೂ ಮಂಜೂರಾತಿ ಅರ್ಜಿ ಹಾಕಿದ್ದು, ಆದರ ಆಧಾರ ಮೇಲೆ ಭೂ ಮಂಜೂರಾತಿಯಾಗಿದೆ, ಭೂ ಮಂಜೂರಾತಿ ಮುನ್ನ ಚೌಡಮ್ಮರವರ ಜಮೀನು ಯಾವುದೆಂದ್ದು ಗೊತ್ತಿರಲಿಲ್ಲ, ಮಂಜೂರಾತಿಯಾದ ನಂತರ ಚೌಡಮ್ಮ ಜಾಗ ಇದೆ ಎಂದು ತಿಳಿದು ಬಂದಿದೆ, ಜಾಗ ಆದಲಿ ಬದಲಿಯಾಗಿದೆ, ಆ ಕಾರಣಕ್ಕೆ ಜಮೀನು ಬಿಡುವಂತೆ ನಾವು ಕೇಳುತ್ತಿರುವುದ್ದಾಗಿ ಹೇಳಿದರು.

Ramesh Babu

Journalist

Recent Posts

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

11 hours ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

12 hours ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

12 hours ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

18 hours ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

22 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

1 day ago