ದೊಡ್ಡಬಳ್ಳಾಪುರ : ಗಿಡಗಂಟೆಗಳಿಂದ ಅವರಿಸಿದ್ದ ಗುಡ್ಡ ಪ್ರದೇಶ, ಗಿಡ ಕಿತ್ತು ಭೂಮಿ ಸಮತಟ್ಟು ಮಾಡಿದ ರೈತ ಕಳೆದ 40 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ, ಭೂ ಮಂಜೂರಾತಿಯ ನಿರೀಕ್ಷೆಯಲ್ಲಿದ್ದ ಸಾಗುವಳಿದಾರನ ಜಮೀನು ಬೇರೊಬ್ಬ ವ್ಯಕ್ತಿಗೆ ಮಂಜೂರಾಗಿದೆ, 40 ವರ್ಷಗಳ ಶ್ರಮ ಹಾಕಿದ ಭೂಮಿಯನ್ನ ಬೀಡುವಂತೆ ದಬ್ಬಾಳಿಕೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ರೈತ ಮುತ್ತುರಾಜ್ ಆರೋಪಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ತಂಬೇನಹಳ್ಳಿಯ ಸರ್ವೆ ನಂಬರ್ 15ರ ಸರ್ಕಾರಿ ಗೋಮಾಳದಲ್ಲಿನ 2 ಎಕರೆ ಜಾಗದಲ್ಲಿ ರೈತ ಮುತ್ತುರಾಜ್ ಸಾಗುವಳಿ ಮಾಡುತ್ತಿದ್ದಾರೆ. ಅವರ ತಂದೆ ತಾಡಪ್ಪ ಕಳೆದ 40 ವರ್ಷಗಳಿಂದ ಈ ಜಾಗದಲ್ಲಿ ಬೇಸಾಯ ಮಾಡುತ್ತಿದ್ದಾರೆ, ಮೊದಲಿಗೆ ಗುಡಿಸಿಲಲ್ಲಿ ವಾಸವಾಗಿದ್ದ ಅವರು ಭೂಮಿಯನ್ನ ಸಾಗುವಳಿ ಭೂಮಿಯನ್ನಾಗಿ ಮಾಡಿದ್ದಾರೆ, ಬೇಸಾಯದ ಜೊತೆಯಲ್ಲಿ ಹಲಸಿನ ಮರಗಳನ್ನ ಬೆಳೆದಿದ್ದಾರೆ, ಇತ್ತಿಚೇಗೆ ಸಾಧರಣ ಮನೆಯನ್ನ ಕಟ್ಟಿಕೊಂಡು ವಾಸವಾಗಿದ್ದಾರೆ, ರಾಗಿ, ಜೋಳ, ಅಲಸಂದಿ, ಅವರೆ, ತೊಗರಿ ಬೆಳೆದು ಜೀವನ ಮಾಡುತ್ತಿದ್ದಾರೆ, ಭೂ ಮಂಜೂರಾತಿಗಾಗಿ ತಹಶೀಲ್ದಾರ್ ಕಛೇರಿಗೆ ಅರ್ಜಿಯನ್ನ ಸಲ್ಲಿಸಿದರು, ಇಂದಲ್ಲಾ ನಾಳೆ ತಮ್ಮ ಹೆಸರಿಗೆ ಜಮೀನು ಮಂಜೂರಾತಿಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಇದೇ ಜಾಗ ಚೌಡಮ್ಮ ಎಂಬುವರ ಹೆಸರಿಗೆ ಮಂಜೂರಾತಿಯಾಗಿದೆ, ಹೊಲ ಮನೆ ಬಿಟ್ಟು ಹೋಗುವಂತೆ ಮುತ್ತುರಾಜ್ ಕುಟುಂಬ ಮೇಲೆ ದೌರ್ಜನ್ಯ ಮಾಡಲಾಗುತ್ತಿದೆ ಎಂಬ ಆರೋಪ ಮಾಡಲಾಗಿದೆ.
ಮಾಧ್ಯಮದೊಂದಿಗೆ ಮಾತನಾಡಿದ ಮುತ್ತುರಾಜ್, ಕಳೆದ 40 ವರ್ಷಗಳಿಂದ ನಾವು ಈ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದೇವೆ, ರೈತನ ಹೆಸರಿಗೆ ಖಾತೆ ಮಾಡುವ ಮುನ್ನ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಮಹಜರ್ ಮಾಡಿ, ಜಮೀನು ಅಕ್ಕಪಕ್ಕ ರೈತನ ಸಹಿ ಪಡೆದು, ನೈಜ ವರದಿಯ ಮೇಲೆ ಸಾಗುವಳಿ ಚೀಟಿ ಮತ್ತು ರೈತನ ಹೆಸರಿಗೆ ಪಹಣಿ ಮಾಡ ಬೇಕು. ಆದರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೆ, ಸ್ದಾಧೀನದಲ್ಲಿರುವ ನಮ್ಮನ್ನು ಕೇಳದೆ, ನಾವು ಸಾಗುವಳಿ ಮಾಡುತ್ತಿರುವ ಜಮೀನನ್ನ ಚೌಡಮ್ಮರವರಿಗೆ ಮಂಜೂರು ಮಾಡಿ ನಮಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸ್ಥಳೀಯ ರೈತ ಮುನೇಗೌಡ ಮಾತನಾಡಿ, ಮುತ್ತುರಾಜ್ ಕುಟುಂಬ ಕಳೆದ 40 ವರ್ಷಗಳಿಂದ ಈ ಜಾಗದಲ್ಲಿ ಸಾಗುವಳಿ ಮಾಡುತ್ತಿದ್ದಾರೆ, ನಾವೇಲ್ಲ ಭೂ ಮಂಜೂರಾತಿಗಾಗಿ ತಹಶೀಲ್ದಾರ್ ಕಛೇರಿಗೆ ಅರ್ಜಿಯನ್ನ ಹಾಕಿದ್ದೇವು, ಇಲ್ಲಿಯವರೆಗೂ ನಮಗೆ ಸಾಗುವಳಿ ಚೀಟಿ ಸಹ ನೀಡಿಲ್ಲ, ಕಛೇರಿಯಿಂದ ಕಛೇರಿಗೆ ಅಲೆಸುತ್ತಿದ್ದಾರೆ, ಹಣ ನೀಡುವ ರೈತರಿಗೆ ಸಾಗುವಳಿ ಚೀಟಿ, ಪಹಣೆ ಮಾಡಲಾಗುತ್ತಿದೆ ಎಂದರು.
ಚೌಡಮ್ಮರವರ ಅಳಿಯ ರಾಜಣ್ಣ ಮಾತನಾಡಿ, ಚೌಡಮ್ಮ ಭೂ ಮಂಜೂರಾತಿ ಅರ್ಜಿ ಹಾಕಿದ್ದು, ಆದರ ಆಧಾರ ಮೇಲೆ ಭೂ ಮಂಜೂರಾತಿಯಾಗಿದೆ, ಭೂ ಮಂಜೂರಾತಿ ಮುನ್ನ ಚೌಡಮ್ಮರವರ ಜಮೀನು ಯಾವುದೆಂದ್ದು ಗೊತ್ತಿರಲಿಲ್ಲ, ಮಂಜೂರಾತಿಯಾದ ನಂತರ ಚೌಡಮ್ಮ ಜಾಗ ಇದೆ ಎಂದು ತಿಳಿದು ಬಂದಿದೆ, ಜಾಗ ಆದಲಿ ಬದಲಿಯಾಗಿದೆ, ಆ ಕಾರಣಕ್ಕೆ ಜಮೀನು ಬಿಡುವಂತೆ ನಾವು ಕೇಳುತ್ತಿರುವುದ್ದಾಗಿ ಹೇಳಿದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…