Categories: ರಾಜ್ಯ

40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ನೋಡಿರಲಿಲ್ಲ- ಸಿಎಂ ಸಿದ್ದರಾಮಯ್ಯ

ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ “ಮಹಾ ನಿರ್ಧಾರ” ಸಮಾವೇಶವನ್ನು ಉದ್ಘಾಟಿಸಿ, ಮಾತನಾಡಿದ ಅವರು, ಬರುವ ಲೋಕಸಭೇಯಲ್ಲಿ ಎಲ್ಲರೂ ಒಗ್ಗಟ್ಟಾಗಿ, ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ ಬಿಜೆಪಿಯನ್ನು ಹೋಗಲಾಡಿಸಲು ಕಾಂಗ್ರೆಸ್ ಕಾರ್ಯಕರ್ತರು ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಬೇಕು.

40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ನೋಡಿರಲಿಲ್ಲ. ಚುನಾವಣೆಯ ಸಂದರ್ಭದಲ್ಲಿ ವಿದೇಶದಲ್ಲಿರುವ ಕಪ್ಪುಹಣವನ್ನು ತಂದು, ದೇಶದ ಪ್ರತಿಯೊಬ್ಬರಿಗೂ 15 ಲಕ್ಷ ನೀಡುತ್ತೇವೆಂಬ ಅವರ ಮಾತು ಸುಳ್ಳಾಯಿತು. 9 ವರ್ಷದಲ್ಲಿ 18 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು, ಹೊಸ ಉದ್ಯೋಗ ಸೃಷ್ಟಿಸುವ ಬದಲು ಇರುವ ಉದ್ಯೋಗವನ್ನು ಯುವಕರು ಕಳೆದುಕೊಳ್ಳುತ್ತಿದ್ದಾರೆ. ಅವರು ಅಚ್ಛೇ ದಿನ್ ಆಯೇಗಾ ಎಂಬ ಮಾತು ಹೇಳಿದ್ದರು. ಇಂದು ಪೆಟ್ರೋಲ್, ಡೀಸೆಲ್, ಗ್ಯಾಸ್, ಗೊಬ್ಬರ, ಕಬ್ಬಿಣ, ಸಿಮೆಂಟು, ಆಹಾರ ಪದಾರ್ಥಗಳೂ ಸೇರಿದಂತೆ ಎಲ್ಲದರ ಬೆಲೆ ಹೆಚ್ಚಾಗಿದೆ. ನರೇಂದ್ರ ಮೋದಿಯವರು ನ ಖಾವೋಂಗ, ನ ಖಾನೆ ದೂಂಗ ಎಂದರು. ಆದರೆ ಕರ್ನಾಟಕದಲ್ಲಿ 40 % ಭ್ರಷ್ಟಾಚಾರ ರಾರಾಜಿಸಿತು. ಆ ಮಾತು ಏನಾಯಿತು.

ಸಾಂಗ್ಲಿ ಜಿಲ್ಲೆ ಕಾಂಗ್ರೆಸ್ ನ ಭದ್ರ ಕೋಟೆಯಾಗಿದ್ದು, ಪ್ರಮುಖ ರಾಷ್ಟ್ರನಾಯಕರನ್ನು ದೇಶಕ್ಕೆ ನೀಡಿದೆ. ಅಂಬೇಡ್ಕರ್ ಅವರು ಭಾರತದ ಸಂವಿಧಾನದ ಕರ್ತೃ. ಈ ಸಂವಿಧಾನವಿರದಿದ್ದರೆ ಸಮಾಜದ ಶೋಷಿತರು, ದೀನದಲಿತರು, ಅಲ್ಪಸಂಖ್ಯಾತರೂ ದೇಶದ ರಾಜಕಾರಣದಲ್ಲಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತಿರಲಿಲ್ಲ. ಎಲ್ಲರಿಗೂ ಸಮಾನತೆಯನ್ನು ಬೋಧಿಸುವ ಸಂವಿಧಾನ ಸಮಸಮಾಜದ ನಿರ್ಮಾಣಕ್ಕೆ ಒತ್ತು ನೀಡುತ್ತದೆ. ಸಾಮಾಜಿಕ ನ್ಯಾಯ, ಸರ್ವರಿಗೂ ಸಮಪಾಲು, ಸಮಬಾಳು ನಮ್ಮ ಸಂವಿಧಾನ ಒದಗಿಸಿಕೊಟ್ಟಿದೆ. ಕಾಂಗ್ರೆಸಿಗರು ಸಂವಿಧಾನವನ್ನು ಬದಲಾಯಿಸಲು ಬಿಡಬಾರದು ಎಂಬ ಶಪಥ ಮಾಡಬೇಕು. ಸಂವಿಧಾನ ಉಳಿದರೆ ಮಾತ್ರ ನಾವೆಲ್ಲರೂ ಉಳಿಯಬಹುದು. ಸಂವಿಧಾನದ ರಕ್ಷಣೆಗೆ ಕಾಂಗ್ರೆಸ್ ನವರು ಎಲ್ಲ ಹೋರಾಟಗಳಿಗೂ ಸಿದ್ಧರಾಗಬೇಕಿದೆ.

ಕೋಮುವಾದಿ ಭಾರತೀಯ ಜನತಾ ಪಕ್ಷ ಸಂವಿಧಾನವನ್ನು ವಿರೋಧಿಸುತ್ತದೆ. ಸಾರ್ವಕರ್, ಗೋಲ್ವಾಕರ್ ಅವರು ಸಂವಿಧಾನವನ್ನು ಅಂದೇ ವಿರೋಧಿಸಿದ್ದರು. ಧರ್ಮಗಳ ನಡುವೆ ಸಂಘರ್ಷಗಳಿಂದ ದೀನದಲಿತರು, ಅಲ್ಪಸಂಖ್ಯಾತರು ಆತಂಕದಲ್ಲಿ ಬದುಕುವಂತಾಗಿದೆ. ಸಂಘ ಪರಿವಾರದವರು ಈಕೆಲಸವನ್ನು ಮಾಡುತ್ತಿದ್ದಾರೆ. ಭಾರತದಲ್ಲಿ ಹಾಗೂ ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ ಆಡಳಿತದಲ್ಲಿದ್ದು, ಅವರನ್ನು ಕಿತ್ತೊಗೆಯಬೇಕಾದ ಜವಾಬ್ದಾರಿ ಕಾಂಗ್ರೆಸ್‍ನ ಮೇಲಿದೆ. ಪ್ರಜಾತಂತ್ರದ ರಕ್ಷಣೆಗಾಗಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ನಾವೆಲ್ಲರೂ ಸಿದ್ದಗೊಳ್ಳಬೇಕಿದೆ.

ಆಪರೇಷನ್ ಕಮಲ ಮೂಲಕ 2008 ಹಾಗೂ 2018 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಭಾಜಪ ಎಂದರೆ ಭ್ರಷ್ಟಾಚಾರ. ಕರ್ನಾಟಕದಲ್ಲಿ ಗುತ್ತಿಗೆದಾರರ ಸಂಘ 40% ಭ್ರಷ್ಟಾಚಾರದ ಸರ್ಕಾರ ಎಂದು ಕರೆಯಿತು. ಭಾಜಪ ಎಂದಿಗೂ ಬಡವರ ಪರ ಕೆಲಸವನ್ನು ಮಾಡಿಲ್ಲ.

ಕಾಂಗ್ರೆಸ್ ಪಕ್ಷ ಕರ್ನಾಟಕದ ಜನರಿಗೆ 5 ಗ್ಯಾರೆಂಟಿಗಳನ್ನು ನೀಡಿದ್ದು, ಅಧಿಕಾರಕ್ಕೆ ಬಂದ ದಿನವೇ 5 ಗ್ಯಾರೆಂಟಿಗಳನ್ನು ಜಾರಿಗೊಳಿಸುವ ತೀರ್ಮಾನವನ್ನು ಮಾಡಲಾಯಿತು. ರಾಜ್ಯದೊಳಗೆ ಎಲ್ಲ ಮಹಿಳೆಯರು ಸರ್ಕಾರಿ ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಜ್ಯೋತಿ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಅನ್ನಭಾಗ್ಯ ಯೋಜನೆಯಡಿ ಏಳು ಕೆಜಿ ಅಕ್ಕಿಯನ್ನು ನೀಡಲಾಗುತ್ತಿತ್ತು. ಈ ಬಾರಿಯೂ ರಾಜ್ಯದ ಬಿಪಿಎಲ್ ಕಾರ್ಡ್ ಹಾಗೂ ಅಂತ್ಯೋದಯ ಕಾರ್ಡ್‍ದಾರರಿಗೆ 10 ಕೆಜಿ ಅಕ್ಕಿಯನ್ನು ನೀಡುವ ಅನ್ನಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ. ಅನ್ನಭಾಗ್ಯ ಯೋಜನೆಗೆ ಎಫ್ ಸಿ ಐ ಅಕ್ಕಿಯನ್ನು ನೀಡುವುದಾಗಿ ಮೊದಲು ಒಪ್ಪಿತ್ತು, ನಂತರ ಕೇಂದ್ರ ಸರ್ಕಾರದ ನೀತಿಯಿಂದ ಕಾಂಗ್ರೆಸ್ ಸರ್ಕಾರಕ್ಕೆ ಅಕ್ಕಿ ನೀಡಬಾರದು ಎಂದು ಸೂಚನೆ ನೀಡಿತು. ಅಕ್ಕಿ ದಾಸ್ತಾನಿದ್ದರೂ ಅಕ್ಕಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣವನ್ನು ಮಾಡಿದೆ. ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದರೂ , ಕರ್ನಾಟಕಕ್ಕೆ ಅಕ್ಕಿ ನೀಡಲು ಒಪ್ಪುತ್ತಿಲ್ಲ. ಈ ಮೂಲಕ ಭಾರತೀಯ ಜನತಾ ಪಕ್ಷದವರು ಬಡವರ ವಿರೋಧಿಗಳು ಎಂಬುದು ನಿರೂಪಿತವಾಗಿದೆ.

ಕರ್ನಾಟಕದಲ್ಲಿರುವ ನಿರುದ್ಯೋಗಿ ಪದವೀಧರ ಯುವಕರಿಗೆ ತಿಂಗಳಿಗೆ 3 ಸಾವಿರ ರೂ ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂ.ಗಳನ್ನು 24 ತಿಂಗಳವರೆಗೆ ನೀಡುವ ಯುವನಿಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ಪ್ರಧಾನಿ ಮೋದಿಯವರು ಹಾಗೂ ಕೇಂದ್ರ ಮಂತ್ರಿಮಂಡಲದ ಅನೇಕರು ರಾಜ್ಯಕ್ಕೆ ಭೇಟಿ ನೀಡಿದರು. ಆದರೂ ಕರ್ನಾಟಕದಲ್ಲಿ ಭಾಜಪ ಸೋತಿರುವುದು ನರೇಂದ್ರ ಮೋದಿಯವರ ಜನಪ್ರಿಯತೆ ಮಸುಕ್ಕಾಗುತ್ತಿದೆ ಎಂಬುದನ್ನು ಸಂಕೇತಿಸುತ್ತಿದೆ. ರಾಜ್ಯದ ಭಾಜಪ ಭ್ರಷ್ಟದಾಚಾರದಲ್ಲಿ ಮುಳುಗಿ, ಜನವಿರೋಧಿಯಾಗಿತ್ತು. ಕೇವಲ ಪ್ರಧಾನಿ ಮೋದಿಯವರನ್ನು ನಂಬಿ ಚುನಾವಣೆ ಗೆಲ್ಲಬಹುದೆಂಬ ಭಾಜಪದ ನಂಬಿಕೆ ಹುಸಿಯಾಯಿತು ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

8 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

9 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

9 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

12 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

18 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

20 hours ago