ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಓತಿಘಟ್ಟ ಗ್ರಾಮದ ಕೇಶವಮೂರ್ತಿ ಎಂಬುವವರು ತಮ್ಮ ಎರಿಟಿಗಾ ಕಾರನ್ನು ಕಳೆದ ಎರಡು ವರ್ಷಗಳಿಂದ ಶಿವಮೊಗ್ಗ ವಿಶೇಷ ಭೂ ಸ್ವಾಧೀನಾಧಿಕಾರಿ (ಎನ್.ಹೆಚ್-206) ಕಛೇರಿಗೆ ಬಾಡಿಗೆಗೆ ನೀಡಿದ್ದರು. 2025ರ ನವೆಂಬರ್ ತಿಂಗಳ ಬಾಡಿಗೆ ಹಣದ ಚೆಕ್ ನೀಡಲು ಸಿದ್ದಲಿಂಗ ರೆಡ್ಡಿ ಅವರು 40,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕೇಶವಮೂರ್ತಿ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಫೆ.14ರ ಸಂಜೆ ಸಿದ್ದಲಿಂಗ ರೆಡ್ಡಿ ಅವರ ಸೂಚನೆಯಂತೆ ಹೊಳಲೂರು ನಾಡಕಛೇರಿಯ ಗ್ರಾಮ ಸಹಾಯಕ ರಾಜೇಶ್, ಶಿವಮೊಗ್ಗದ ನೆಹರೂ ಸ್ಟೇಡಿಯಂ ಬಳಿ ಕೇಶವಮೂರ್ತಿ ಅವರಿಂದ 40,000 ರೂ. ಹಣ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚಂದ್ರಶೇಖರ್.ಬಿ.ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಪೊಲೀಸ್ ನಿರೀಕ್ಷಕರಾದ ಕೆ.ಪಿ.ರುದ್ರೇಶ್, ಗುರುರಾಜ್ ಮೈಲಾರ್, ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿ ಯೋಗೇಶ್.ಜಿ.ಸಿ, ಟೀಕಪ್ಪ, ಸುರೇಂದ್ರ.ಹೆಚ್.ಸಿ, ಬಿ.ಟಿ.ಚನ್ನೇಶ್, ದೇವರಾಜ್, ಅರುಣ್ ಕುಮಾರ್.ಯು.ಬಿ, ಪ್ರಕಾಶ್ ಬಾರಿಮರದ್, ಆದರ್ಶ್, ಚಂದ್ರಿಬಾಯಿ, ಪ್ರದೀಪ್, ಗೋಪಿ, ಚೇತನ್ ಮತ್ತು ಆನಂದ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…