ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಓತಿಘಟ್ಟ ಗ್ರಾಮದ ಕೇಶವಮೂರ್ತಿ ಎಂಬುವವರು ತಮ್ಮ ಎರಿಟಿಗಾ ಕಾರನ್ನು ಕಳೆದ ಎರಡು ವರ್ಷಗಳಿಂದ ಶಿವಮೊಗ್ಗ ವಿಶೇಷ ಭೂ ಸ್ವಾಧೀನಾಧಿಕಾರಿ (ಎನ್.ಹೆಚ್-206) ಕಛೇರಿಗೆ ಬಾಡಿಗೆಗೆ ನೀಡಿದ್ದರು. 2025ರ ನವೆಂಬರ್ ತಿಂಗಳ ಬಾಡಿಗೆ ಹಣದ ಚೆಕ್ ನೀಡಲು ಸಿದ್ದಲಿಂಗ ರೆಡ್ಡಿ ಅವರು 40,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕೇಶವಮೂರ್ತಿ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಫೆ.14ರ ಸಂಜೆ ಸಿದ್ದಲಿಂಗ ರೆಡ್ಡಿ ಅವರ ಸೂಚನೆಯಂತೆ ಹೊಳಲೂರು ನಾಡಕಛೇರಿಯ ಗ್ರಾಮ ಸಹಾಯಕ ರಾಜೇಶ್, ಶಿವಮೊಗ್ಗದ ನೆಹರೂ ಸ್ಟೇಡಿಯಂ ಬಳಿ ಕೇಶವಮೂರ್ತಿ ಅವರಿಂದ 40,000 ರೂ. ಹಣ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚಂದ್ರಶೇಖರ್.ಬಿ.ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಪೊಲೀಸ್ ನಿರೀಕ್ಷಕರಾದ ಕೆ.ಪಿ.ರುದ್ರೇಶ್, ಗುರುರಾಜ್ ಮೈಲಾರ್, ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿ ಯೋಗೇಶ್.ಜಿ.ಸಿ, ಟೀಕಪ್ಪ, ಸುರೇಂದ್ರ.ಹೆಚ್.ಸಿ, ಬಿ.ಟಿ.ಚನ್ನೇಶ್, ದೇವರಾಜ್, ಅರುಣ್ ಕುಮಾರ್.ಯು.ಬಿ, ಪ್ರಕಾಶ್ ಬಾರಿಮರದ್, ಆದರ್ಶ್, ಚಂದ್ರಿಬಾಯಿ, ಪ್ರದೀಪ್, ಗೋಪಿ, ಚೇತನ್ ಮತ್ತು ಆನಂದ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…