ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಓತಿಘಟ್ಟ ಗ್ರಾಮದ ಕೇಶವಮೂರ್ತಿ ಎಂಬುವವರು ತಮ್ಮ ಎರಿಟಿಗಾ ಕಾರನ್ನು ಕಳೆದ ಎರಡು ವರ್ಷಗಳಿಂದ ಶಿವಮೊಗ್ಗ ವಿಶೇಷ ಭೂ ಸ್ವಾಧೀನಾಧಿಕಾರಿ (ಎನ್.ಹೆಚ್-206) ಕಛೇರಿಗೆ ಬಾಡಿಗೆಗೆ ನೀಡಿದ್ದರು. 2025ರ ನವೆಂಬರ್ ತಿಂಗಳ ಬಾಡಿಗೆ ಹಣದ ಚೆಕ್ ನೀಡಲು ಸಿದ್ದಲಿಂಗ ರೆಡ್ಡಿ ಅವರು 40,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕೇಶವಮೂರ್ತಿ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಫೆ.14ರ ಸಂಜೆ ಸಿದ್ದಲಿಂಗ ರೆಡ್ಡಿ ಅವರ ಸೂಚನೆಯಂತೆ ಹೊಳಲೂರು ನಾಡಕಛೇರಿಯ ಗ್ರಾಮ ಸಹಾಯಕ ರಾಜೇಶ್, ಶಿವಮೊಗ್ಗದ ನೆಹರೂ ಸ್ಟೇಡಿಯಂ ಬಳಿ ಕೇಶವಮೂರ್ತಿ ಅವರಿಂದ 40,000 ರೂ. ಹಣ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚಂದ್ರಶೇಖರ್.ಬಿ.ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಪೊಲೀಸ್ ನಿರೀಕ್ಷಕರಾದ ಕೆ.ಪಿ.ರುದ್ರೇಶ್, ಗುರುರಾಜ್ ಮೈಲಾರ್, ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿ ಯೋಗೇಶ್.ಜಿ.ಸಿ, ಟೀಕಪ್ಪ, ಸುರೇಂದ್ರ.ಹೆಚ್.ಸಿ, ಬಿ.ಟಿ.ಚನ್ನೇಶ್, ದೇವರಾಜ್, ಅರುಣ್ ಕುಮಾರ್.ಯು.ಬಿ, ಪ್ರಕಾಶ್ ಬಾರಿಮರದ್, ಆದರ್ಶ್, ಚಂದ್ರಿಬಾಯಿ, ಪ್ರದೀಪ್, ಗೋಪಿ, ಚೇತನ್ ಮತ್ತು ಆನಂದ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…