ಹೊಟ್ಟೆ ನೋವು ಎಂದು 45 ವರ್ಷದ ಮಹಿಳೆ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದು, ಸೂಕ್ತ ರೀತಿಯಲ್ಲಿ ತಪಾಸಣೆ ನಡೆಸಿದ ವೈದ್ಯರು, ಆಕೆಯ ಹೊಟ್ಟೆಯಲ್ಲಿದ್ದ 5 ಕೆ.ಜಿ ಗಡ್ಡೆಯನ್ನ ಹೊರಗೆ ತೆಗೆದಿದ್ದಾರೆ.
ದೊಡ್ಡಬಳ್ಳಾಪುರ ನಗರದ 45 ವರ್ಷದ ಮಹಿಳೆ ಕಳೆದ ಮೂರು ತಿಂಗಳಿಂದ ಹೊಟ್ಟೆ ನೋವಿನಿಂದ ನರಳುತ್ತಿದ್ದರು, ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದ ಮಹಿಳೆ ವೈದ್ಯರನ್ನು ಭೇಟಿ ಮಾಡಿದ್ದಾರೆ, ಮಹಿಳೆಯನ್ನು ಡಾ. ಅರ್ಚನಾ ಪರೀಕ್ಷೆ ನಡೆಸಿದ್ದಾರೆ, ಸ್ಕ್ಯಾನಿಂಗ್ ನಲ್ಲಿ ಆಕೆಯ ಹೊಟ್ಟೆಯಲ್ಲಿ 5 ಕೆ.ಜಿ ಗಡ್ಡೆ ಇರುವುದು ಪತ್ತೆಯಾಗಿದೆ.
ಡಾ.ಅರ್ಜನಾ ನೇತೃತ್ವದ ತಂಡ ಸತತ ಎರಡು ಗಂಟೆ ಶಸ್ತ್ರಚಿಕಿತ್ಸೆಯನ್ನ ನಡೆಸಿ ಆಕೆಯ ಹೊಟ್ಟೆಯಲ್ಲಿದ್ದ ಗಡ್ಡೆಯನ್ನ ಹೊರಗೆ ತೆಗೆದಿದ್ದಾರೆ, ಮಹಿಳೆ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯ ನಿಗಾ ಘಟಕದಲ್ಲಿ ದಾಖಲು ಮಾಡಲಾಗಿದೆ. ಹೆಚ್ಚಿನ ಪರೀಕ್ಷೆಗಾಗಿ ಗಡ್ಡೆಯನ್ನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ.
ಶಸ್ತ್ರಚಿಕಿತ್ಸೆ ನಡೆಸಿದ ಡಾ.ಅರ್ಚನಾ ನೇತೃತ್ವದ ವೈದ್ಯರ ತಂಡವನ್ನ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ಟಿಎಚ್ಓ ಡಾ.ಶಾರದಾ ನಾಗನಾಥ್, ಡಾ.ಮಂಜುನಾಥ್ ಸೇರಿದಂತೆ ಇತರರು ಅಭಿನಂಧಿಸಿದ್ದಾರೆ.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…