ಹೊಟ್ಟೆ ನೋವು ಎಂದು 45 ವರ್ಷದ ಮಹಿಳೆ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದು, ಸೂಕ್ತ ರೀತಿಯಲ್ಲಿ ತಪಾಸಣೆ ನಡೆಸಿದ ವೈದ್ಯರು, ಆಕೆಯ ಹೊಟ್ಟೆಯಲ್ಲಿದ್ದ 5 ಕೆ.ಜಿ ಗಡ್ಡೆಯನ್ನ ಹೊರಗೆ ತೆಗೆದಿದ್ದಾರೆ.
ದೊಡ್ಡಬಳ್ಳಾಪುರ ನಗರದ 45 ವರ್ಷದ ಮಹಿಳೆ ಕಳೆದ ಮೂರು ತಿಂಗಳಿಂದ ಹೊಟ್ಟೆ ನೋವಿನಿಂದ ನರಳುತ್ತಿದ್ದರು, ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದ ಮಹಿಳೆ ವೈದ್ಯರನ್ನು ಭೇಟಿ ಮಾಡಿದ್ದಾರೆ, ಮಹಿಳೆಯನ್ನು ಡಾ. ಅರ್ಚನಾ ಪರೀಕ್ಷೆ ನಡೆಸಿದ್ದಾರೆ, ಸ್ಕ್ಯಾನಿಂಗ್ ನಲ್ಲಿ ಆಕೆಯ ಹೊಟ್ಟೆಯಲ್ಲಿ 5 ಕೆ.ಜಿ ಗಡ್ಡೆ ಇರುವುದು ಪತ್ತೆಯಾಗಿದೆ.
ಡಾ.ಅರ್ಜನಾ ನೇತೃತ್ವದ ತಂಡ ಸತತ ಎರಡು ಗಂಟೆ ಶಸ್ತ್ರಚಿಕಿತ್ಸೆಯನ್ನ ನಡೆಸಿ ಆಕೆಯ ಹೊಟ್ಟೆಯಲ್ಲಿದ್ದ ಗಡ್ಡೆಯನ್ನ ಹೊರಗೆ ತೆಗೆದಿದ್ದಾರೆ, ಮಹಿಳೆ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯ ನಿಗಾ ಘಟಕದಲ್ಲಿ ದಾಖಲು ಮಾಡಲಾಗಿದೆ. ಹೆಚ್ಚಿನ ಪರೀಕ್ಷೆಗಾಗಿ ಗಡ್ಡೆಯನ್ನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ.
ಶಸ್ತ್ರಚಿಕಿತ್ಸೆ ನಡೆಸಿದ ಡಾ.ಅರ್ಚನಾ ನೇತೃತ್ವದ ವೈದ್ಯರ ತಂಡವನ್ನ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ಟಿಎಚ್ಓ ಡಾ.ಶಾರದಾ ನಾಗನಾಥ್, ಡಾ.ಮಂಜುನಾಥ್ ಸೇರಿದಂತೆ ಇತರರು ಅಭಿನಂಧಿಸಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…