ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್‌ ಡಿಟೆಕ್ಟರ್‌ನ ಇನ್ಸ್ಟಾಲೇಶನ್‌ ಮತ್ತು ಸೇವೆ ಕುರಿತ 13 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು 2022ರ *ನವೆಂಬರ್‌ 30* ಕೊನೆಯ ದಿನವಾಗಿದೆ.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಖುದ್ದಾಗಿ ಭೇಟಿ ನೀಡಬಹುದು ಅಥವಾ ಕಚೇರಿ ದೂರವಾಣಿ ಸಂಖ್ಯೆ: 080-27728166 (ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆ), ಮೊಬೈಲ್‌ ಸಂಖ್ಯೆ: 9113880324, 9740982585, 8884554510, 8050549412, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಜೆ.ಆನಂದ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

3 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

17 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

18 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

18 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

19 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

22 hours ago