5ನೇ ರಾಷ್ಟ್ರೀಯ ಸಬ್-ಜೂನಿಯರ್  ಹಾಗೂ ಜೂನಿಯರ್ ಯೋಗಾಸನ ಚಾಂಪಿಯನ್ ಶಿಪ್: ಕಂಚಿನ ಪದಕ ಗೆದ್ದ ದೊಡ್ಡಬಳ್ಳಾಪುರದ ಯೋಗಪಟು ಹೃತಿಕ್ ಜಿ.ಸಿ ಹಾಗೂ ಪ್ರಣವ್ ನಾಡಿಗ್: ಗಣ್ಯರಿಂದ ಅಭಿನಂದನೆ

ಇದೇ ನವೆಂಬರ್ 10 ರಿಂದ 14 ರವರೆಗೆ ಅಸ್ಸಾಂನ ಗುವಾಹಾಟಿಯಲ್ಲಿ ನಡೆದ 5ನೇ ರಾಷ್ಟ್ರೀಯ ಸಬ್ – ಜ್ಯೂನಿಯರ್ ಹಾಗೂ ಜೂನಿಯರ್ ಯೋಗಾಸನ ಚಾಂಪಿಯನ್ಶಿಪ್ ನಲ್ಲಿ ಕರ್ನಾಟಕದ KYSA ತಂಡವನ್ನು ಪ್ರತಿನಿಧಿಸಿ 10-14 ವಯಸ್ಸಿನ ವಯೋಮಿತ ರಿಧಮಿಕ್ ಪೇರ್ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಯೋಗಪಟು ಹೃತಿಕ್ ಜಿ.ಸಿ ಹಾಗೂ ಪ್ರಣವ್ ನಾಡಿಗ್ ಭಾಗವಹಿಸಿ ಕಂಚಿನ ಪದಕವನ್ನು ಪಡೆದಿದ್ದಾರೆ.

ಈ ಮೂಲಕ ಖೆಲೋ ಇಂಡಿಯಾ ಯೂತ್ ಗೇಮ್ಸ್ -2024 ಗೆ ಆಯ್ಕೆಯಾಗಿರುತ್ತಾರೆ. ಇವರನ್ನು KYSA ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಎಂ ನಿರಂಜನ್ ಮೂರ್ತಿ ಹಾಗೂ ಕರ್ನಾಟಕ ಯೋಗ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಮತ್ತು ಯೋಗ ಶಿಕ್ಷಕರಾದ ರಘು ಹೆಚ್.ಜಿ ಹಾಗೂ ಮೊಹಮ್ಮದ್ ಫರೋಜ್ ಶೇಖ್, ಡ್ಯಾನ್ಸ್ ಕೊರಿಯೋಗ್ರಾಫರ್ ಆನಂದ್ ಮತ್ತು ಮಾರುತಿ ವ್ಯಾಯಮ ಶಾಲೆಯ ಟ್ರಸ್ಟಿ ಗಳು ಅಭಿನಂದಿಸುತ್ತಾರೆ.

ಸ್ಮರಣ ಶಕ್ತಿ ಮತ್ತು ಸದೃಢ ಆರೋಗ್ಯಕ್ಕಾಗಿ ಚಿಕ್ಕ ವಯಸ್ಸಿಂದ ನಮ್ಮ ಮಗನನ್ನು ಯೋಗ ಕಲಿಯಲು ಸೇರಿಸಿದ್ದು, ಈಗ ಅದೇ ಕ್ಷೇತ್ರದಲ್ಲಿ ವಿವಿಧ ಕ್ಲಿಷ್ಟಕರ ಆಸನಗಳನ್ನ ಮಾಡುವ ಮೂಲಕ ಎಲ್ಲರನ್ನ ನಿಬ್ಬೆರಗಾಗುವಂತೆ ಮಾಡಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವುದು ನಮಗೆ ಹೆಮ್ಮೆಯ ವಿಷಯ ಎಂದು ಹೃತಿಕ್ ಜಿ.ಸಿ ಪೋಷಕರು ಹೇಳಿದ್ದಾರೆ.

ನಮ್ಮ ಮಗನ ಈ ಎಲ್ಲಾ ಸಾಧನೆಗಳಿಂದ ನಮಗೆ ಖುಷಿ‌ ತಂದಿದೆ. ಮನೆಯಲ್ಲಿ ಹಾಗೂ ಯೋಗ ತರಬೇತಿ ಕೇಂದ್ರದಲ್ಲಿ ಪ್ರತಿದಿನ ಕಠಿಣ ಅಭ್ಯಾಸ ಮಾಡುತ್ತಿರುತ್ತಾನೆ. ಅದೇರೀತಿ ಓದುವ ಕಡೆಗೂ ಗಮನ ಹರಿಸುತ್ತಾನೆ. ನಮ್ಮ ಮಗ ನಮ್ಮ ಹೆಮ್ಮೆ ಎಂದು ಹೃತಿಕ್ ಜಿ.ಸಿ ಸಾಧನೆಗೆ ಪೋಷಕರು ಹೆಮ್ಮೆಯ ಮಾತುಗಳನ್ನಾಡಿದರು.

ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ದುಶ್ಚಟಗಳಿಗೆ ದಾಸರಾಗಿ ಜೀವನ ಹಾಳು ಮಾಡಿಕೊಳ್ಳದೇ ಪ್ರತಿದಿನ ಯೋಗ ಮಾಡಿ ಆರೋಗ್ಯವನ್ನ ಸ್ಥಿರವಾಗಿ ಕಾಪಾಡಿಕೊಳ್ಳಬೇಕು ಎಂದು ಯೋಗಪಟು ಹೃತಿಕ್ ಜಿ.ಸಿ ಹೇಳಿದರು.

ನಾನು ಓದುವ ಜೊತೆಗೆ ಯೋಗಾಭ್ಯಾಸ ಮಾಡುತ್ತೇನೆ. ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ವಿವಿಧ ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿದ್ದೇನೆ. ಇದಕ್ಕೆಲ್ಲ ನನ್ನ ಯೋಗ ಟೀಚರ್‌ ಹಾಗೂ ನನ್ನ ತಂದೆ-ತಾಯಿ. ಯೋಗದಲ್ಲಿ ಇನ್ನಷ್ಟು ಸಾಧನೆ ಮಾಡುವ ಹಂಬಲ ನನಗಿದೆ. ಈ ನಿಟ್ಟಿನಲ್ಲಿ ಅಭ್ಯಾಸ ಮಾಡುವೆ. ಎಲ್ಲರೂ ಯೋಗ ಮಾಡಿ ಆರೋಗ್ಯದಿಂದಿರಿ ಎಂದು ಹೇಳಿದರು.

ಯೋಗ ಶಿಕ್ಷಕ ರಘು ಹೆಚ್.ಜಿ ಮಾತನಾಡಿ, ಆಧುನಿಕ‌ ಯುಗದ ಮಕ್ಕಳು ಮೊಬೈಲ್, ಟೆಲಿವಿಷನ್, ಪ್ರೀತಿ-ಪ್ರೇಮ, ಮಾದಕ ವಸ್ತುಗಳ ಸೇವನೆ ಸೇರಿದಂತೆ ಕೆಟ್ಟಚಟಗಳಿಗೆ ಒಳಗಾಗಿ, ಮಾನಸಿಕವಾಗಿ ಖಿನ್ನತೆಯಿಂದ ಬಳಲಿ, ಕೊನೆಗೆ ಅನಾರೋಗ್ಯ ಪೀಡಿತರಾಗಿಯೋ ಅಥವಾ ಆತ್ಮಹತ್ಯೆ ಮಾಡಿಕೊಂಡೋ ತಮ್ಮ ಉಜ್ವಲ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿರುವ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣುಮುಂದಿವೆ. ಕೆಟ್ಟಚಟಗಳಿಂದ ದೂರವಿದ್ದು, ಉತ್ತಮ ಭವಿಷ್ಯ, ಆರೋಗ್ಯದಿಂದ ಇರಲು ಯೋಗ ಬಹಳ ಮುಖ್ಯ‌. ಈ ಹಿನ್ನೆಲೆ ಎಲ್ಲರು ಯೋಗ ಮಾಡಲೇಬೇಕು ಎಂದು ಹೇಳಿದರು.

Ramesh Babu

Journalist

Recent Posts

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

2 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

5 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

9 hours ago

ಬಾಗಲಕೋಟೆಯಲ್ಲಿ ಕಲ್ಲುತೂರಾಟ ಪ್ರಕರಣ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…

9 hours ago

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

16 hours ago