5ನೇ ರಾಷ್ಟ್ರೀಯ ಸಬ್-ಜೂನಿಯರ್  ಹಾಗೂ ಜೂನಿಯರ್ ಯೋಗಾಸನ ಚಾಂಪಿಯನ್ ಶಿಪ್: ಕಂಚಿನ ಪದಕ ಗೆದ್ದ ದೊಡ್ಡಬಳ್ಳಾಪುರದ ಯೋಗಪಟು ಹೃತಿಕ್ ಜಿ.ಸಿ ಹಾಗೂ ಪ್ರಣವ್ ನಾಡಿಗ್: ಗಣ್ಯರಿಂದ ಅಭಿನಂದನೆ

ಇದೇ ನವೆಂಬರ್ 10 ರಿಂದ 14 ರವರೆಗೆ ಅಸ್ಸಾಂನ ಗುವಾಹಾಟಿಯಲ್ಲಿ ನಡೆದ 5ನೇ ರಾಷ್ಟ್ರೀಯ ಸಬ್ – ಜ್ಯೂನಿಯರ್ ಹಾಗೂ ಜೂನಿಯರ್ ಯೋಗಾಸನ ಚಾಂಪಿಯನ್ಶಿಪ್ ನಲ್ಲಿ ಕರ್ನಾಟಕದ KYSA ತಂಡವನ್ನು ಪ್ರತಿನಿಧಿಸಿ 10-14 ವಯಸ್ಸಿನ ವಯೋಮಿತ ರಿಧಮಿಕ್ ಪೇರ್ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಯೋಗಪಟು ಹೃತಿಕ್ ಜಿ.ಸಿ ಹಾಗೂ ಪ್ರಣವ್ ನಾಡಿಗ್ ಭಾಗವಹಿಸಿ ಕಂಚಿನ ಪದಕವನ್ನು ಪಡೆದಿದ್ದಾರೆ.

ಈ ಮೂಲಕ ಖೆಲೋ ಇಂಡಿಯಾ ಯೂತ್ ಗೇಮ್ಸ್ -2024 ಗೆ ಆಯ್ಕೆಯಾಗಿರುತ್ತಾರೆ. ಇವರನ್ನು KYSA ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಎಂ ನಿರಂಜನ್ ಮೂರ್ತಿ ಹಾಗೂ ಕರ್ನಾಟಕ ಯೋಗ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಮತ್ತು ಯೋಗ ಶಿಕ್ಷಕರಾದ ರಘು ಹೆಚ್.ಜಿ ಹಾಗೂ ಮೊಹಮ್ಮದ್ ಫರೋಜ್ ಶೇಖ್, ಡ್ಯಾನ್ಸ್ ಕೊರಿಯೋಗ್ರಾಫರ್ ಆನಂದ್ ಮತ್ತು ಮಾರುತಿ ವ್ಯಾಯಮ ಶಾಲೆಯ ಟ್ರಸ್ಟಿ ಗಳು ಅಭಿನಂದಿಸುತ್ತಾರೆ.

ಸ್ಮರಣ ಶಕ್ತಿ ಮತ್ತು ಸದೃಢ ಆರೋಗ್ಯಕ್ಕಾಗಿ ಚಿಕ್ಕ ವಯಸ್ಸಿಂದ ನಮ್ಮ ಮಗನನ್ನು ಯೋಗ ಕಲಿಯಲು ಸೇರಿಸಿದ್ದು, ಈಗ ಅದೇ ಕ್ಷೇತ್ರದಲ್ಲಿ ವಿವಿಧ ಕ್ಲಿಷ್ಟಕರ ಆಸನಗಳನ್ನ ಮಾಡುವ ಮೂಲಕ ಎಲ್ಲರನ್ನ ನಿಬ್ಬೆರಗಾಗುವಂತೆ ಮಾಡಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವುದು ನಮಗೆ ಹೆಮ್ಮೆಯ ವಿಷಯ ಎಂದು ಹೃತಿಕ್ ಜಿ.ಸಿ ಪೋಷಕರು ಹೇಳಿದ್ದಾರೆ.

ನಮ್ಮ ಮಗನ ಈ ಎಲ್ಲಾ ಸಾಧನೆಗಳಿಂದ ನಮಗೆ ಖುಷಿ‌ ತಂದಿದೆ. ಮನೆಯಲ್ಲಿ ಹಾಗೂ ಯೋಗ ತರಬೇತಿ ಕೇಂದ್ರದಲ್ಲಿ ಪ್ರತಿದಿನ ಕಠಿಣ ಅಭ್ಯಾಸ ಮಾಡುತ್ತಿರುತ್ತಾನೆ. ಅದೇರೀತಿ ಓದುವ ಕಡೆಗೂ ಗಮನ ಹರಿಸುತ್ತಾನೆ. ನಮ್ಮ ಮಗ ನಮ್ಮ ಹೆಮ್ಮೆ ಎಂದು ಹೃತಿಕ್ ಜಿ.ಸಿ ಸಾಧನೆಗೆ ಪೋಷಕರು ಹೆಮ್ಮೆಯ ಮಾತುಗಳನ್ನಾಡಿದರು.

ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ದುಶ್ಚಟಗಳಿಗೆ ದಾಸರಾಗಿ ಜೀವನ ಹಾಳು ಮಾಡಿಕೊಳ್ಳದೇ ಪ್ರತಿದಿನ ಯೋಗ ಮಾಡಿ ಆರೋಗ್ಯವನ್ನ ಸ್ಥಿರವಾಗಿ ಕಾಪಾಡಿಕೊಳ್ಳಬೇಕು ಎಂದು ಯೋಗಪಟು ಹೃತಿಕ್ ಜಿ.ಸಿ ಹೇಳಿದರು.

ನಾನು ಓದುವ ಜೊತೆಗೆ ಯೋಗಾಭ್ಯಾಸ ಮಾಡುತ್ತೇನೆ. ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ವಿವಿಧ ಯೋಗ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿದ್ದೇನೆ. ಇದಕ್ಕೆಲ್ಲ ನನ್ನ ಯೋಗ ಟೀಚರ್‌ ಹಾಗೂ ನನ್ನ ತಂದೆ-ತಾಯಿ. ಯೋಗದಲ್ಲಿ ಇನ್ನಷ್ಟು ಸಾಧನೆ ಮಾಡುವ ಹಂಬಲ ನನಗಿದೆ. ಈ ನಿಟ್ಟಿನಲ್ಲಿ ಅಭ್ಯಾಸ ಮಾಡುವೆ. ಎಲ್ಲರೂ ಯೋಗ ಮಾಡಿ ಆರೋಗ್ಯದಿಂದಿರಿ ಎಂದು ಹೇಳಿದರು.

ಯೋಗ ಶಿಕ್ಷಕ ರಘು ಹೆಚ್.ಜಿ ಮಾತನಾಡಿ, ಆಧುನಿಕ‌ ಯುಗದ ಮಕ್ಕಳು ಮೊಬೈಲ್, ಟೆಲಿವಿಷನ್, ಪ್ರೀತಿ-ಪ್ರೇಮ, ಮಾದಕ ವಸ್ತುಗಳ ಸೇವನೆ ಸೇರಿದಂತೆ ಕೆಟ್ಟಚಟಗಳಿಗೆ ಒಳಗಾಗಿ, ಮಾನಸಿಕವಾಗಿ ಖಿನ್ನತೆಯಿಂದ ಬಳಲಿ, ಕೊನೆಗೆ ಅನಾರೋಗ್ಯ ಪೀಡಿತರಾಗಿಯೋ ಅಥವಾ ಆತ್ಮಹತ್ಯೆ ಮಾಡಿಕೊಂಡೋ ತಮ್ಮ ಉಜ್ವಲ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿರುವ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣುಮುಂದಿವೆ. ಕೆಟ್ಟಚಟಗಳಿಂದ ದೂರವಿದ್ದು, ಉತ್ತಮ ಭವಿಷ್ಯ, ಆರೋಗ್ಯದಿಂದ ಇರಲು ಯೋಗ ಬಹಳ ಮುಖ್ಯ‌. ಈ ಹಿನ್ನೆಲೆ ಎಲ್ಲರು ಯೋಗ ಮಾಡಲೇಬೇಕು ಎಂದು ಹೇಳಿದರು.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

3 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

13 hours ago