ರಾಜ್ಯದಲ್ಲಿ ಸುಮಾರು 1.92 ಕೋಟಿ ಕುಟುಂಬಗಳು ವಿದ್ಯುತ್ ಸಂಪರ್ಕ ಹೊಂದಿದ್ದು, ಸುಮಾರು 1.73 ಕೋಟಿ ಕುಟುಂಬಗಳು 200 ಯೂನಿಟ್ ಗಿಂತಲೂ ಕಡಿಮೆ ವಿದ್ಯುತ್ ಬಳಸುತ್ತಿವೆ. ಇದುವರೆಗೂ ಸುಮಾರು 1.50 ಕೋಟಿ ವಿದ್ಯುತ್ ಬಳಕೆದಾರರು ‘ಗೃಹ ಜ್ಯೋತಿ’ ಯೋಜನೆಗೆ ತಮ್ಮಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಲಬುರಗಿಯಲ್ಲಿ ಗೃಹ ಜ್ಯೋತಿ ಗ್ಯಾರೆಂಟಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ನೋಂದಾಸಿಕೊಂಡ ಕುಟುಂಬಗಳಿಗೆ ಶೂನ್ಯ ಬಿಲ್ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಈ ಮೂಲಕ ಕರ್ನಾಟಕದ ಅಂದಾಜು 1.73 ಕೋಟಿ ಫಲಾನುಭವಿಗಳ ಮನೆಗಳಲ್ಲಿ ನಮ್ಮ ಗೃಹಜ್ಯೋತಿ ಬೆಳಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು ಈ ಬಗ್ಗೆ ಗುಲ್ಲೆಬ್ಬಿಸುತ್ತಿದ್ದಾರೆ. ವಿರೋಧ ಪಕ್ಷದವರಲ್ಲದೇ ಈ ದೇಶದ ಪ್ರಧಾನಿಗಳು ಕೂಡ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ. ಈ ದೇಶವನ್ನು ದಿವಾಳಿ ಮಾಡಿರುವುದು ನರೇಂದ್ರ ಮೋದಿಯವರು ಎಂದರು.
ಕೇಂದ್ರದ ನರೇಂದ್ರ ಮೋದಿ ಸರ್ಕಾರ, ಕರ್ನಾಟಕದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರ ರಾಜ್ಯವನ್ನು ಹಿಂದುಳಿಯುವಂತೆ ಮಾಡಿದೆ. ನಾವು ನುಡಿದಂತೆ ನಡೆದಿದ್ದೇವೆ. ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡುತ್ತಿರುವುದರಿಂದ ಹೊಟ್ಟೆಯುರಿಯಿಂದ ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ಹೆಸರನ್ನು ಬದಲಾಯಿಸಿದ್ದೇ ಬಿಜೆಪಿ ಕೊಡುಗೆ ಎಂದು ಹೇಳಿದ್ದಾರೆ.
ಬೆಲೆ ಏರಿಕೆಯ ಮೂಲಕ ನರೇಂದ್ರ ಮೋದಿಯವರು ಜನರ ಬಳಿ ಇದ್ದ ದುಡ್ಡು ಕಿತ್ತುಕೊಳ್ಳತ್ತಾರೆ. ಜನತೆ ವಿರೋಧ ಪಕ್ಷದವರ ಮಾತುಗಳಿಗೆ ಕಿವಿ ಕೊಡಬೇಕಾದ ಅಗತ್ಯವಿಲ್ಲ. ಕಲಂ 371 (ಜೆ) ಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿಯವರು ಹೇಳಿದ್ದರು. ಅದನ್ನು ಕಾಂಗ್ರೆಸ್ ಸರ್ಕಾರ ಮಾಡಿ ತೋರಿಸಿದೆ ಎಂದು ತಿಳಿಸಿದ್ದಾರೆ.
ಈ ವೇಳೆ ಉಪಮುಖ್ಯಮಂತ್ರಿ ಡಿಕೆಶಿ,
ಇಂಧನ ಸಚಿವ ಕೆ.ಜೆ.ಜಾರ್ಜ್, ರಾಜ್ಯಸಭಾ ಸದಸ್ಯ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜ್ಯ ಸಚಿವ ಸಂಪುಟದ ಸದಸ್ಯರು, ಶಾಸಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…