Categories: ರಾಜ್ಯ

5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ-ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಸುಮಾರು 1.92 ಕೋಟಿ ಕುಟುಂಬಗಳು ವಿದ್ಯುತ್ ಸಂಪರ್ಕ ಹೊಂದಿದ್ದು, ಸುಮಾರು 1.73 ಕೋಟಿ ಕುಟುಂಬಗಳು 200 ಯೂನಿಟ್ ಗಿಂತಲೂ ಕಡಿಮೆ ವಿದ್ಯುತ್ ಬಳಸುತ್ತಿವೆ. ಇದುವರೆಗೂ ಸುಮಾರು 1.50 ಕೋಟಿ ವಿದ್ಯುತ್ ಬಳಕೆದಾರರು ‘ಗೃಹ ಜ್ಯೋತಿ’ ಯೋಜನೆಗೆ ತಮ್ಮಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಲಬುರಗಿಯಲ್ಲಿ ಗೃಹ ಜ್ಯೋತಿ ಗ್ಯಾರೆಂಟಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ನೋಂದಾಸಿಕೊಂಡ ಕುಟುಂಬಗಳಿಗೆ ಶೂನ್ಯ ಬಿಲ್ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಈ ಮೂಲಕ ಕರ್ನಾಟಕದ ಅಂದಾಜು 1.73 ಕೋಟಿ ಫಲಾನುಭವಿಗಳ ಮನೆಗಳಲ್ಲಿ ನಮ್ಮ ಗೃಹಜ್ಯೋತಿ ಬೆಳಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು ಈ ಬಗ್ಗೆ ಗುಲ್ಲೆಬ್ಬಿಸುತ್ತಿದ್ದಾರೆ. ವಿರೋಧ ಪಕ್ಷದವರಲ್ಲದೇ ಈ ದೇಶದ ಪ್ರಧಾನಿಗಳು ಕೂಡ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ. ಈ ದೇಶವನ್ನು ದಿವಾಳಿ ಮಾಡಿರುವುದು ನರೇಂದ್ರ ಮೋದಿಯವರು ಎಂದರು.

ಕರ್ನಾಟಕ ಹಿಂದೆ ಎಲ್ಲ ಭರವಸೆಗಳನ್ನು ಈಡೇರಿಸಿದಾಗ ಆರ್ಥಿಕವಾಗಿ ಸುಭದ್ರವಾಗಿತ್ತು. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ, ಬೆಲೆ ಏರಿಕೆ ಮಾಡಿ, ನಿರುದ್ಯೋಗದ ಸಮಸ್ಯೆಯನ್ನು ಹೆಚ್ಚು ಮಾಡಿ, ರಾಜ್ಯದ ಬಡವರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದಾರೆ ಬಿಜೆಪಿ ವಿರುದ್ಧ ಕಿಡಿಕಾರಿದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ, ಕರ್ನಾಟಕದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರ ರಾಜ್ಯವನ್ನು ಹಿಂದುಳಿಯುವಂತೆ ಮಾಡಿದೆ. ನಾವು ನುಡಿದಂತೆ ನಡೆದಿದ್ದೇವೆ. ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡುತ್ತಿರುವುದರಿಂದ ಹೊಟ್ಟೆಯುರಿಯಿಂದ ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ಹೆಸರನ್ನು ಬದಲಾಯಿಸಿದ್ದೇ ಬಿಜೆಪಿ ಕೊಡುಗೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷದವರು ಅನ್ನಭಾಗ್ಯ ಕಾರ್ಯಕ್ರಮದ ಬಗ್ಗೆಯೂ ಗುಲ್ಲೆಬ್ಬಿಸಿದರು. ಕೇಂದ್ರದಲ್ಲಿರುವುದು ಬಡವರ ವಿರೋಧಿ ಸರ್ಕಾರ. ಅಕ್ಕಿ ಕೊಡುವುದಾಗಿ ಮೊದಲು ಒಪ್ಪಿಗೆ ನೀಡಿ, ನಂತರ ಅಕ್ಕಿ ಕೊಡದೆ ರಾಜಕೀಯ ಮಾಡಿದರು. ರೂ.34 ರಂತೆ ಹಣ ಕೊಡುತ್ತೇವೆ ಎಂದರೂ ಅವರು ಬಡವರಿಗೆ 5 ಕೆಜಿ ಅಕ್ಕಿಯನ್ನು ನೀಡಲಿಲ್ಲ. ಬಡತನ ಹಿಂಸೆಯ ಅತಿ ಕೆಟ್ಟ ರೂಪ ಎಂದು ಮಹಾತ್ಮಾ ಗಾಂಧಿ ಹೇಳಿದ್ದರು. ದೇಶದಲ್ಲಿ ಅಸಮಾನತೆ ಇದೆ, ಬಡತನ ಹಾಗೂ ಶ್ರೀಮಂತಿಕೆ ಇದೆ. ಇದನ್ನು ಹೋಗಲಾಡಿಸುವ ಕೆಲಸ ನಾವು ಮಾಡಬೇಕು ಎಂದರು.

ಬೆಲೆ ಏರಿಕೆಯ ಮೂಲಕ ನರೇಂದ್ರ ಮೋದಿಯವರು ಜನರ ಬಳಿ ಇದ್ದ ದುಡ್ಡು ಕಿತ್ತುಕೊಳ್ಳತ್ತಾರೆ. ಜನತೆ ವಿರೋಧ ಪಕ್ಷದವರ ಮಾತುಗಳಿಗೆ ಕಿವಿ ಕೊಡಬೇಕಾದ ಅಗತ್ಯವಿಲ್ಲ. ಕಲಂ 371 (ಜೆ) ಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿಯವರು ಹೇಳಿದ್ದರು. ಅದನ್ನು ಕಾಂಗ್ರೆಸ್ ಸರ್ಕಾರ ಮಾಡಿ ತೋರಿಸಿದೆ ಎಂದು ತಿಳಿಸಿದ್ದಾರೆ.

ನಮ್ಮ ಸರ್ಕಾರ ಎಂದಿಗೂ ಮಾತಿಗೆ ತಪ್ಪುವುದಿಲ್ಲ. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮೂಲಕ ಹೇಳಿಸಿರುವ ಗ್ಯಾರಂಟಿ ಯೋಜನೆಗಳು ಹಾಗೂ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳನ್ನು ಜಾರಿ ಮಾಡದೇ ಇರುವುದಿಲ್ಲ ಎಂದರು.

ಈ ವೇಳೆ ಉಪಮುಖ್ಯಮಂತ್ರಿ ಡಿಕೆಶಿ,
ಇಂಧನ ಸಚಿವ ಕೆ.ಜೆ.ಜಾರ್ಜ್, ರಾಜ್ಯಸಭಾ ಸದಸ್ಯ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜ್ಯ ಸಚಿವ ಸಂಪುಟದ ಸದಸ್ಯರು, ಶಾಸಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

7 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

15 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

16 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago