ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ. ಇನ್ನೂ 5 ಸಾವಿರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು. ನಾವು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಮುನ್ನುಡಿ ಬರೆದೆವು. ಆದರೆ ಬಿಜೆಪಿಯವರು ನಮ್ಮ ಕೆಲಸವನ್ನು ಅವರು ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಇದು “ಅಟ್ಟಿಕ್ಕಿದವರಿಗಿಂತ ಬೊಟ್ಟಿಕ್ಕಿದವರು ಮೇಲು” ಎನ್ನುವ ಗಾಧೆ ಮಾತಿನಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಿದ್ದ “ಬಂಜಾರ ಭವನ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾವಿರಾರು ವರ್ಷಗಳಿಂದ ನಾವೆಲ್ಲಾ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೆವು. ಬ್ರಿಟಿಷರು ಬಂದ ಮೇಲೆ ಶಿಕ್ಷಣದ ಅವಕಾಶಗಳು ತೆರೆದುಕೊಂಡವು. ಡಾ.ಬಿ.ಆರ್ ಅಂಬೇಡ್ಕರ್ ಅವರ ಕಾರಣದಿಂದ ವಂಚಿತರೆಲ್ಲರಿಗೂ ಶಿಕ್ಷಣ ಮೂಲಭೂತ ಹಕ್ಕಾಯಿತು. ಈ ಕಾರಣಕ್ಕೇ ನಾವೆಲ್ಲರೂ ಶಿಕ್ಷಿತರಾಗಬೇಕು. ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸುತ್ತದೆ. ಸ್ವಾಭಿಮಾನಿಯಾದರೆ ಶೋಷಣೆಯಿಂದ ತಪ್ಪಿಸಿಕೊಳ್ಳಬಹುದು ಎಂದರು.
ಬಂಜಾರ ಸಮುದಾಯದ ಅಭಿವೃದ್ಧಿಗೆ ಬಜೆಟ್ ನಲ್ಲಿ ರೂ.275 ಕೋಟಿ ನೀಡಲಾಗಿತ್ತು. ಸೇವಾಲಾಲ್ ವಸತಿ ಶಾಲೆ ಸೇರಿದಂತೆ ಇನ್ನಿತರೆ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಣ ನೀಡುತ್ತೇನೆ ಎಂದು ಭರವಸೆ ನೀಡಿದರು.
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…