ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ. ಇನ್ನೂ 5 ಸಾವಿರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು. ನಾವು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಮುನ್ನುಡಿ ಬರೆದೆವು. ಆದರೆ ಬಿಜೆಪಿಯವರು ನಮ್ಮ ಕೆಲಸವನ್ನು ಅವರು ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಇದು “ಅಟ್ಟಿಕ್ಕಿದವರಿಗಿಂತ ಬೊಟ್ಟಿಕ್ಕಿದವರು ಮೇಲು” ಎನ್ನುವ ಗಾಧೆ ಮಾತಿನಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಿದ್ದ “ಬಂಜಾರ ಭವನ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾವಿರಾರು ವರ್ಷಗಳಿಂದ ನಾವೆಲ್ಲಾ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೆವು. ಬ್ರಿಟಿಷರು ಬಂದ ಮೇಲೆ ಶಿಕ್ಷಣದ ಅವಕಾಶಗಳು ತೆರೆದುಕೊಂಡವು. ಡಾ.ಬಿ.ಆರ್ ಅಂಬೇಡ್ಕರ್ ಅವರ ಕಾರಣದಿಂದ ವಂಚಿತರೆಲ್ಲರಿಗೂ ಶಿಕ್ಷಣ ಮೂಲಭೂತ ಹಕ್ಕಾಯಿತು. ಈ ಕಾರಣಕ್ಕೇ ನಾವೆಲ್ಲರೂ ಶಿಕ್ಷಿತರಾಗಬೇಕು. ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸುತ್ತದೆ. ಸ್ವಾಭಿಮಾನಿಯಾದರೆ ಶೋಷಣೆಯಿಂದ ತಪ್ಪಿಸಿಕೊಳ್ಳಬಹುದು ಎಂದರು.
ಬಂಜಾರ ಸಮುದಾಯದ ಅಭಿವೃದ್ಧಿಗೆ ಬಜೆಟ್ ನಲ್ಲಿ ರೂ.275 ಕೋಟಿ ನೀಡಲಾಗಿತ್ತು. ಸೇವಾಲಾಲ್ ವಸತಿ ಶಾಲೆ ಸೇರಿದಂತೆ ಇನ್ನಿತರೆ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಣ ನೀಡುತ್ತೇನೆ ಎಂದು ಭರವಸೆ ನೀಡಿದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…