ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ. ಇನ್ನೂ 5 ಸಾವಿರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು. ನಾವು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಮುನ್ನುಡಿ ಬರೆದೆವು. ಆದರೆ ಬಿಜೆಪಿಯವರು ನಮ್ಮ ಕೆಲಸವನ್ನು ಅವರು ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಇದು “ಅಟ್ಟಿಕ್ಕಿದವರಿಗಿಂತ ಬೊಟ್ಟಿಕ್ಕಿದವರು ಮೇಲು” ಎನ್ನುವ ಗಾಧೆ ಮಾತಿನಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಿದ್ದ “ಬಂಜಾರ ಭವನ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾವಿರಾರು ವರ್ಷಗಳಿಂದ ನಾವೆಲ್ಲಾ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೆವು. ಬ್ರಿಟಿಷರು ಬಂದ ಮೇಲೆ ಶಿಕ್ಷಣದ ಅವಕಾಶಗಳು ತೆರೆದುಕೊಂಡವು. ಡಾ.ಬಿ.ಆರ್ ಅಂಬೇಡ್ಕರ್ ಅವರ ಕಾರಣದಿಂದ ವಂಚಿತರೆಲ್ಲರಿಗೂ ಶಿಕ್ಷಣ ಮೂಲಭೂತ ಹಕ್ಕಾಯಿತು. ಈ ಕಾರಣಕ್ಕೇ ನಾವೆಲ್ಲರೂ ಶಿಕ್ಷಿತರಾಗಬೇಕು. ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸುತ್ತದೆ. ಸ್ವಾಭಿಮಾನಿಯಾದರೆ ಶೋಷಣೆಯಿಂದ ತಪ್ಪಿಸಿಕೊಳ್ಳಬಹುದು ಎಂದರು.
ಬಂಜಾರ ಸಮುದಾಯದ ಅಭಿವೃದ್ಧಿಗೆ ಬಜೆಟ್ ನಲ್ಲಿ ರೂ.275 ಕೋಟಿ ನೀಡಲಾಗಿತ್ತು. ಸೇವಾಲಾಲ್ ವಸತಿ ಶಾಲೆ ಸೇರಿದಂತೆ ಇನ್ನಿತರೆ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಣ ನೀಡುತ್ತೇನೆ ಎಂದು ಭರವಸೆ ನೀಡಿದರು.
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…