ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ. ಇನ್ನೂ 5 ಸಾವಿರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು. ನಾವು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಮುನ್ನುಡಿ ಬರೆದೆವು. ಆದರೆ ಬಿಜೆಪಿಯವರು ನಮ್ಮ ಕೆಲಸವನ್ನು ಅವರು ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಇದು “ಅಟ್ಟಿಕ್ಕಿದವರಿಗಿಂತ ಬೊಟ್ಟಿಕ್ಕಿದವರು ಮೇಲು” ಎನ್ನುವ ಗಾಧೆ ಮಾತಿನಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಿದ್ದ “ಬಂಜಾರ ಭವನ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾವಿರಾರು ವರ್ಷಗಳಿಂದ ನಾವೆಲ್ಲಾ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೆವು. ಬ್ರಿಟಿಷರು ಬಂದ ಮೇಲೆ ಶಿಕ್ಷಣದ ಅವಕಾಶಗಳು ತೆರೆದುಕೊಂಡವು. ಡಾ.ಬಿ.ಆರ್ ಅಂಬೇಡ್ಕರ್ ಅವರ ಕಾರಣದಿಂದ ವಂಚಿತರೆಲ್ಲರಿಗೂ ಶಿಕ್ಷಣ ಮೂಲಭೂತ ಹಕ್ಕಾಯಿತು. ಈ ಕಾರಣಕ್ಕೇ ನಾವೆಲ್ಲರೂ ಶಿಕ್ಷಿತರಾಗಬೇಕು. ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸುತ್ತದೆ. ಸ್ವಾಭಿಮಾನಿಯಾದರೆ ಶೋಷಣೆಯಿಂದ ತಪ್ಪಿಸಿಕೊಳ್ಳಬಹುದು ಎಂದರು.
ಬಂಜಾರ ಸಮುದಾಯದ ಅಭಿವೃದ್ಧಿಗೆ ಬಜೆಟ್ ನಲ್ಲಿ ರೂ.275 ಕೋಟಿ ನೀಡಲಾಗಿತ್ತು. ಸೇವಾಲಾಲ್ ವಸತಿ ಶಾಲೆ ಸೇರಿದಂತೆ ಇನ್ನಿತರೆ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಣ ನೀಡುತ್ತೇನೆ ಎಂದು ಭರವಸೆ ನೀಡಿದರು.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…