Categories: ಮೈಸೂರು

50 ಲಕ್ಷ ಪ್ಲಾಟ್ ಗಳು ಕೃಷಿ ಇಂದ ಬೇರೆ ಉದ್ದೇಶಕ್ಕೆ ಕನ್ವರ್ಟ್ ಆಗಿದೆ. ಆದರೆ, ದಾಖಲೆಗಳಲ್ಲಿ ಈಗಲೂ ಕೃಷಿ ಭೂಮಿ ಎಂದು ಇದೆ-ರಾಜ್ಯದಲ್ಲಿ ಶೇಕಡಾ 15 ರಷ್ಟು ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳು ಖಾಲಿ-ಕಂದಾಯ ಸಚಿವ ಕೃಷ್ಣ ಭೈರೇಗೌಡ

ಪ್ರತಿಯೊಂದು ಜೀವ ಮೂಲ್ಯವಾಗಿದ್ದು ಅತಿವೃಷ್ಟಿಯಿಂದ ಯಾವುದೇ ಪ್ರಾಣ ಹಾಗೂ ಆಸ್ತಿ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹಾನಿಯನ್ನು ತಡೆಗಟ್ಟಲು ಅಧಿಕಾರಿಗಳು ಸಜ್ಜಾಗಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ತಿಳಿಸಿದರು.

ಇಂದು ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮೈಸೂರು ವಿಭಾಗದ ಕಂದಾಯ ಇಲಾಖೆಯ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಮಳೆಯಿಂದ ಪ್ರಾಣ ಹಾಗೂ ಆಸ್ತಿ ಹಾನಿ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಇನ್ನೂ ಹೆಚ್ಚು ಮಳೆ ಆದರೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಗುರುತಿಸಿಕೊಂಡಿರಬೇಕು.

ಕಂದಾಯ ಇಲಾಖೆಯು ಮಾತೃ ಇಲಾಖೆಯಾಗಿದ್ದು, ಕಂದಾಯ ಇಲಾಖೆಯಲ್ಲಿ ಹೆಚ್ಚು ಹೆಚ್ಚು ಅರ್ಜಿಗಳು ವಿಲೇವಾರಿ ಆಗಿದ್ದರೂ ಸಹ ಹೆಚ್ಚು ಬಾಕಿ ಕಂದಾಯ ಇಲಾಖೆಯಲ್ಲಿಯೇ ಇವೆ. ಕಂದಾಯ ಇಲಾಖೆಯು ಕಾಲ ಕಾಲಕ್ಕೆ ಬರುವ ಹೊಸ ಹೊಸ ಯೋಜನೆಗಳ ಜಾರಿ ಜವಾಬ್ಧಾರಿ ಕಂದಾಯ ಇಲಾಖೆಯ ಮೇಲೆಯೇ ಬರುತ್ತದೆ. ಆದರೂ ಸಹ ಜನರು ಕಂದಾಯ ಇಲಾಖೆಯ ಮೇಲೆ ಹೆಚ್ಚು ಅವಲಂಬಿತರಾಗಿರುತ್ತಾರೆ. ಜನರಿಗೆ ಸಕಾಲದಲ್ಲಿ ಕೆಲಸ ಮಾಡಿ ಅವರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಇಲಾಖೆಯ ಪ್ರಮುಖ ಜವಾಬ್ಧಾರಿ ಆಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಈ ಹಿಂದೆ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಿದ್ದರೆ ಈಗ ಕಾರ್ಯದ ಒತ್ತಡ ಹೆಚ್ಚಾಗುತ್ತಾ ಇರಲಿಲ್ಲ. ಕಾನೂನಿನ ಅಡಿಯಲ್ಲಿ ಸಮಾಜದ ಸಾರ್ವಜನಿಕರ ಹಿತದೃಷ್ಟಿಯಿಂದ ಮಾಡಬೇಕಾದ ಕಾರ್ಯಗಳೇ ಆಗಿವೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ 24 ಲಕ್ಷ ಮಲ್ಟಿ ಓನರ್ ಆರ್ ಟಿ ಸಿ ಗಳು ಇವೆ. ಇದರಲ್ಲಿ 2 ಲಕ್ಷ ಸರ್ಕಾರದ ಸ್ವತ್ತಿನ ಮಲ್ಟಿ ಓನರ್ ಆರ್ ಟಿ ಸಿ ಗಳು ಇವೆ. ಇವನ್ನೂ ಈ ಹಿಂದೆಯಿಂದಲೂ ಬಗೆಹರಿಸದೆ ಹಾಗೆ ಬಿಟ್ಟುಕೊಂಡು ಬಂದಿದ್ದೇವೆ. 50 ಲಕ್ಷ ಪ್ಲಾಟ್ ಗಳು ಕೃಷಿ ಇಂದ ಬೇರೆ ಉದ್ದೇಶಕ್ಕೆ ಕನ್ವರ್ಟ್ ಆಗಿದೆ. ಆದರೆ, ದಾಖಲೆಗಳಲ್ಲಿ ಈಗಲೂ ಕೃಷಿ ಭೂಮಿ ಎಂದು ಇದೆ. ಇದು ಕಾಲ ಕಾಲಕ್ಕೆ ಬದಲಾವಣೆ ಆಗಿದ್ದರೆ ಈಗ ಒತ್ತಡ ಆಗುತ್ತಿರಲಿಲ್ಲ. ಆದ್ದರಿಂದ ಇದು ನಮ್ಮ ಜವಾಬ್ದಾರಿ ಆಗಿದ್ದು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಿ ಎಂದು ಸೂಚಿಸಿದರು.

ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುತ್ತದೆ. ಈಗಾಗಲೇ ಮಳೆಯಿಂದ 20 ಸಾವು ಸಂಬಂಧಿಸಿದೆ. ವಿಪತ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಿ ಸಾವು ನೋವು ಆಗದಂತೆ ನೋಡಿಕೊಳ್ಳಬೇಕು. ಕಳೆದ ಬಾರಿ ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಿದ್ದೀರಿ. ಹಾಗೆಯೇ ಈಗ ಹೆಚ್ಚು ಮಳೆಯಿಂದ ಆಗುವ ಅನಾಹುತಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ಇನ್ನೂ ಮುಂದೆ ವಿಪತ್ತಿನಿಂದ ಒಂದೇ ಒಂದು ಸಾವು ಆಗದಂತೆ ನೋಡಿಕೊಳ್ಳಲು ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

1763 ಗ್ರಾಮಗಳನ್ನು ಸಮಸ್ಯೆ ಕಂಡು ಬರುವ ಗ್ರಾಮಗಳು ಎಂದು ಗುರುತಿಸಲಾಗಿದೆ. ಇಲ್ಲಿ ಅತಿವೃಷ್ಟಿಯಿಂದ ಆಗುವ ಅನಾಹುತಗಳನ್ನು ತಡೆಯಲು ವೆಲ್ನರಬಲ್ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿಗಳ ಹಂತದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್ ಫೋರ್ಸ್ ತಂಡಗಳನ್ನು ರಚಿಸಬೇಕು. ಈ ತಂಡದಲ್ಲಿ ಅಗ್ನಿಶಾಮಕ ಅಧಿಕಾರಿಗಳು, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಕಂದಾಯ ಇಲಾಖೆಯ ಅಧಿಕಾರಿಗಳು ಇರಬೇಕು. ಈ ತಂಡಗಳು ಅತಿವೃಷ್ಟಿಯಿಂದ ತೊಂದರೆ ಆಗುವ ವಲ್ನರಬಲ್ ಸ್ಥಳಗಳನ್ನು ಗುರುತಿಸಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಮಳೆಯಿಂದ ಕುಸಿಯಬಹುದಾದ ಮನೆಗಳನ್ನು ಗುರುತಿಸಿ ಅಂತಹ ಮನೆಗಳಲ್ಲಿ ಜಿಲ್ಲಾಧಿಕಾರಿಗಳ ಹಾಗೂ ತಹಶೀಲ್ದಾರ್ ಅವರ ಪಿ.ಡಿ ಖಾತೆಯಲ್ಲಿ 776 ಕೋಟಿ ರೂ ಟಾಸ್ಕ್ ಫೋರ್ಸ್ ಹಣ ಇದೆ. ರಾಷ್ಟೀಯ ವಿಪತ್ತು ನಿರ್ವಹಣಾ 4 ತುಕಡಿಗಳು ಈಗಾಗಲೇ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ರಾಜ್ಯ ವಿಪತ್ತು ನಿರ್ವಹಣಾ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿವಿಧ ಹಳ್ಳಿಗಳಿಗೆ ತೆರಳಲು ಕಾಲು ಸಂಕಗಳನ್ನು ಬಳಕೆ ಮಾಡುತ್ತಾರೆ. ಅಪಾಯದ ಸ್ಥಿತಿಯಲ್ಲಿ ಇರುವ ಕಾಲು ಸಂಕಗಳನ್ನು ಅಬಿವೃದ್ಧಿ ಮಾಡಲು ಕ್ರಿಯಾ ಯೋಜನೆಯನ್ನು ತಯಾರಿಸಿ ನರೇಗಾ ಯೋಜನೆಯಡಿ ದುರಸ್ಥಿ ಮಾಡಿಸಿ, ಅಪಾಯಕಾರಿ ಹಳ್ಳ, ತೊರೆಗಳ ಬಳಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಶೇಕಡಾ 15 ರಷ್ಟು ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳು ಮಾತ್ರ ಖಾಲಿ ಇವೆ. ಗ್ರಾಮ ಆಡಳಿತಾಧಿಕಾರಿ ಗಳು ವಿವಿದೆಡೆ ನಿಯೋಜನೆಯ ಮೇಲೆ ಇದ್ದರೆ ಅವರನ್ನು ಮೂಲ ಹುದ್ದೆಗಳಿಗೆ ಜಿಲ್ಲಾಧಿಕಾರಿಗಳು ಕರೆಸಿಕೊಳ್ಳಿ. ಗ್ರಾಮ ಆಡಳಿತಾಧಿಕಾರಿಗಳನ್ನು ಅವರ ಮೂಲ ಕರ್ತವ್ಯಕ್ಕೆ ಕಳುಹಿಸಿ. ಈಗಾಗಲೇ 1000 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಅಧಿಸೂಚನೆ ಹೊರಡಿಸಿದ್ದು ನೇಮಕಾತಿ ಹಂತದಲ್ಲಿ ಇದೆ. 1000 ಹುದ್ದೆಗಳ ಭರ್ತಿಯಿಂದ ಹುದ್ದೆಗಳ ಕೊರತೆ ನೀಗಲಿದೆ ಎಂದು ತಿಳಿಸಿದರು.

163 ತಾಲ್ಲೂಕು ಗಳಲ್ಲಿ ಬಗರ್ ಹುಕ್ಮ್ ಸಾಗುವಳಿ ಸಮಿತಿಗಳನ್ನು ರಚಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿದ್ದು ಈ ಸಮಿತಿಗಳು ಈಗಾಗಲೇ 4.38 ಎಕರೆಗಿಂತ ಕಡಿಮೆ ಭೂಮಿ ಇರುವವರಿಗೆ ಮಾತ್ರ ಆಸ್ತಿಯನ್ನು ಸಕ್ರಮಿಕರಣ ಮಾಡಿ ಕೊಡಲು ಅವಕಾಶವಿದೆ. ಫಲಾನುಭವಿಗಳಿಗೆ ಮಾಲೀಕತ್ವದ ಹಕ್ಕನ್ನು ಡಿಜಲೀಕರಣ ಮಾಡಿ ಕೊಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ 4 ಕೋಟಿ ಆರ್ ಟಿ ಸಿ ಯಲ್ಲಿ 2 ಕೋಟಿ ಆರ್ ಟಿ ಸಿ ಗಳ ಪರಿಶೀಲನೆ ಆಗಿದೆ. ಆರ್ ಟಿ ಸಿ ಗಳಿಗೆ ಆಧಾರ್ ಅಥೆಂಟಿಕೇಶನ್ ಆಗಬೇಕು. ಇದರಿಂದ ಡೂಪ್ಲಿಕೇಟ್ ಸೇಲ್ ಅನ್ನು ನಿಯಂತ್ರಣ ಮಾಡಲು ಅನುಕೂಲವಾಗುತ್ತದೆ. ಪತಿಯೊಬ್ಬರು ತಮ್ಮ ಜಮೀನಿಗೆ ಆಧಾರ್ ಸಿಡಿಂಗ್ ಮಾಡಲು ಭೂ ಆಧಾರ್ ಯೋಜನೆಯನ್ನು ಜಾರಿಗೆ ತರಲಾಗಿದೆ. ರೈತರು ತಮ್ಮ ಆಸ್ತಿಗೆ ಆಧಾರ್ ಸೀಡಿಂಗ್ ಮಾಡಿಸಿದರೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡುವುದನ್ನು ತಡೆಯಲು ಸಾಧ್ಯವಾಗುತ್ತದೆ ಎಂದರು.

ಪೋಡಿ ಮುಕ್ತ ಗ್ರಾಮಗಳನ್ನು ಮಾಡಲು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಯಾರ ದಾಖಲೆಗಳು ಸಮರ್ಪಕವಾಗಿ ಇರುವವರ ಪೋಡಿಯನ್ನು ಮಾಡಲಾಗುತ್ತದೆ. 767 ಸರ್ವೇಯರ್ ಹುದ್ದೆಗಳನ್ನು ಭರ್ತಿ ಹಾಗೂ 43 ಎಡಿ ಎಲ್ ಆರ್ ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದೆ. 23 ಕೋಟಿ ವೆಚ್ಚದಲ್ಲಿ ಆಧುನಿಕ ಸರ್ವೇ ಉಪಕರಣಗಳನ್ನು ನೀಡಲಾಗುತ್ತಿದೆ. ಮಾರ್ಚ್ ತಿಂಗಳಲ್ಲಿ 1200 ಜನ ಲೈಸನ್ಸ್ ಸರ್ವೇಯರ್ ಗಳನ್ನು ಈಗಾಗಲೇ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಲಾಂಡ್ ಬೀಟ್ ಆ್ಯಪ್ ನಲ್ಲಿ ರಾಜ್ಯದಲ್ಲಿ ಇರುವ ಸರ್ಕಾರಿ ಆಸ್ತಿಗಳನ್ನು ಅಪ್ಲೋಡ್ ಮಾಡಬೇಕು. ಜುಲೈ ಅಂತ್ಯದ ಒಳಗೆ ಪ್ರತಿ ಗ್ರಾಮದಲ್ಲಿ ಇರುವ ಸರ್ಕಾರಿ ಆಸ್ತಿಗಳ ಮಾಹಿತಿಯನ್ನು ಪ್ರತಿ ಗ್ರಾಮಪಂಚಾಯತ್ ಗಳ ಬೋರ್ಡ್ ಗಳಲ್ಲಿ ಹಾಗೂ ನಮ್ಮ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು. ಸಾರ್ವಜನಿಕರು ಈ ಆಸ್ತಿಗಳ ಪಾರದರ್ಶಕವಾಗಿ ನೋಡುವಂತೆ ಆಗಬೇಕು. ಈಗಾಗಲೇ ಶೇಕಡಾ 65 ರಷ್ಟು ಲ್ಯಾಂಡ್ ಬೀಟ್ ತಪಾಸಣೆ ಆಗಿದೆ. ಉಳಿದ ಶೇಕಡಾ 35 ರಷ್ಟು ತಪಾಸಣೆ ಆಗಬೇಕು ಎಂದು ತಿಳಿಸಿದರು.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳಾದ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಮಾತನಾಡಿ ಸರ್ಕಾರದ ವಿವಿಧ ಉದ್ದೇಶಗಳಿಗೆ ಕಾಯ್ದಿರಿಸಿರುವ ಭೂಮಿಯನ್ನು ಗುರುತಿಸಿ ಸಂರಕ್ಷಣೆ ಮಾಡಬೇಕು. ಕಂದಾಯ ಇಲಾಖೆಗಳ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ಜಿಲ್ಲಾಧಿಕಾರಿಗಳ ಹಾಗೂ ತಹಶೀಲ್ದಾರ್ ಅವರ ನ್ಯಾಯಾಲಯದಲ್ಲಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಬೇಕು. ಈ ನ್ಯಾಯಾಲಯದಲ್ಲಿ ತೀರ್ಪು ನೀಡುವಾಗ ಯಾವ ಕಾಯ್ದೆಯಡಿ ತೀರ್ಪು ನೀಡಲಾಗಿದೆ ಎಂದು ಸ್ಪಷ್ಟವಾಗಿ ನಮೂದಿಸಬೇಕು. ವಿಲೇವಾರಿ ಅದ ಪ್ರಕರಣಗಳ ಕುರಿತು ಕಂದಾಯ ಇಲಾಖೆಯ ಸಾಫ್ಟವೇರ್ ನಲ್ಲಿ ಅಪ್ಲೋಡ್ ಮಾಡಬೇಕು ಎಂದು ತಿಳಿಸಿದರು.

ವಿಪತ್ತು ನಿರ್ವಹಣೆ ಯ ಪ್ರದಾನ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್ ಅವರು ಮಾತನಾಡಿ ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ಹಾಗೂ ಆಗಸ್ಟ್ ಮಾಹೆಯಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ. ಈ ಸಂಧರ್ಭದಲ್ಲಿ ಕೊಡಗು ಮತ್ತು ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಗುಡ್ಡ ಕುಸಿತ ಹಾಗೂ ಭೂ ಕುಸಿತ ಕಂಡುಬರುವ ಸಾಧ್ಯತೆ ಇದೆ. ಈ ಸಂಬಂಧ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ಅಗತ್ಯ ನಿರಾಶ್ರಿತ ಕೇಂದ್ರಗಳು ಹಾಗೂ ಗಂಜಿ ಕೇಂದ್ರಗಳನ್ನು ತೆರೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅತಿವೃಷ್ಟಿಯಿಂದ ಆಗಿರುವ ಪ್ರಾಣ ಹಾನಿ, ಜಾನುವಾರು ಸಾವು ಹಾಗೂ ಬೆಳೆ ಹನಿಗೆ ಎಸ್ ಡಿ ಆರ್ ಎಫ್ ನಿಯಮಾವಳಿಗಳ ಅನ್ವಯ ಪರಿಹಾರವನ್ನು ಸಕಾಲದಲ್ಲಿ ಫಲಾನುಭವಿಗಳಿಗೆ ಪಾವತಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮೈಸೂರು ವಿಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಸರ್ವೇ ಇಲಾಖೆಯ ಉಪ ನಿರ್ದೇಶಕರು ಹಾಗೂ ತಹಶೀಲ್ದಾರ್ ಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

59 minutes ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

4 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

5 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

16 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago