ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಪ್ರಭು ಕೆಂಪೇಗೌಡರ ಪುತ್ಥಳಿಗೆ ಹೂವಿನ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ಬಳಿಕ ಕೆಂಪೇಗೌಡರ ಆಡಳಿತ, ದೂರದೃಷ್ಟಿ ಹಾಗೂ ರಾಜ್ಯಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಸಹ ಕೆಂಪೇಗೌಡರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ ಹಾಗೂ ಕೃಷ್ಣ ಬೈರೇಗೌಡ ಸೇರಿದಂತೆ ಹಲವು ಗಣ್ಯರು, ಒಕ್ಕಲಿಗ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ ಕೆಂಪೇಗೌಡರಿಗೆ ಗೌರವ ನಮನ ಸಲ್ಲಿಸಿದರು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಡೆದ ಕಾರ್ಯಕ್ರಮವು ಸಾಂಪ್ರದಾಯಿಕ ಹಾಗೂ ಗೌರವಯುತ ವಾತಾವರಣದಲ್ಲಿ ನೆರವೇರಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…