Categories: ರಾಜ್ಯ

545 ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ: ರಾಜ್ಯ ಸರ್ಕಾರದಿಂದ ನ್ಯಾಯಾಂಗ ತನಿಖೆಗೆ ಆದೇಶ

ಪೊಲೀಸ್ ಸಬ್‌ ಇನ್ಸ್ ಪೆಕ್ಟರ್ (ಸಿವಿಲ್) 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು 2021ರ ಅಕ್ಟೋಬರ್ 3ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಒಳಪಡಿಸಲಾಗಿದೆ.

ಈ ಹಿನ್ನೆಲೆ 545 ಪಿ.ಎಸ್.ಐ ನೇಮಕಾತಿ ಲಿಖಿತ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ನಡೆಸಲು ಅನುವಾಗುವಂತೆ Commissions of Inquiry Act 1952 (Central Act LX of 1952) ರ ನಿಯಮ 3ರ ಉಪ ನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಬಿ. ವೀರಪ್ಪ ರವರ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿದೆ.

ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳು ಒಳಗೊಂಡಂತೆ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ. ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಹೆಚ್ಚುವರಿ ತನಿಖೆಯನ್ನು ಮುಂದುವರೆಸಲಾಗಿರುತ್ತದೆ.

ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆಯನ್ನು ಬರೆದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ 1977ರ ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳಲ್ಲಿ ನಿಯಮ 20ರಲ್ಲಿ ನಮೂದಿಸಿರುವ ದುರ್ನಡತೆಯನ್ನು ಎಸಗಿರುವ ಕಾರಣ ಡಿಜಿಪಿ ನೇಮಕಾತಿ ಇವರ ಆದೇಶ ಸಂಖ್ಯೆ: 98/ನೇಮಕಾತಿ- 2/2020-21, ದಿನಾಂಕ: 20.06.2023ರಲ್ಲಿ ಸದರಿಯವರುಗಳನ್ನು ಪೊಲೀಸ್‌ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಲಾಗಿದೆ (Permanently Debarred).

545 ಪೊಲೀಸ್ ಸಬ್-ಇನ್ಸ್‌ಪೆಕ್ಟ‌ರ್ ನೇರ ನೇಮಕಾತಿ ಪ್ರಕಿಯೆಯಲ್ಲಿ ಬಹು ಆಯಾಮದ ಅಕ್ರಮಗಳು ನಡೆದಿರುವುದು ಕಂಡುಬಂದಿರುವುದರಿಂದ ಹಾಗೂ ಈ ಅಕ್ರಮ ಪಕ್ರರಣವು ಗಂಭೀರ ಸ್ವರೂಪದಾಗಿದ್ದು, ಸಾರ್ವಜನಿಕ ಮಹತ್ವವುಳ್ಳ ವಿಷಯವಾಗಿರುವುದರಿಂದ, ಇನ್ನುಮುಂದೆ ನಡೆಯುವ ಪೊಲೀಸ್ ನೇಮಕಾತಿಗಳು ಅತ್ಯಂತ ಪಾರದರ್ಶಕವಾಗಿ ನಡೆಸುವ ಅಗತ್ಯವಿರುವುದರಿಂದ ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆಯ ಅಗತ್ಯವಿರುವುದನ್ನು ಮನಗಂಡು, Commissions of Inquiry Act 1952ರ ನಿಯಮ 3ರ ಉಪ ನಿಯಮ 1 ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ನಿರ್ಧರಿಸಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

20 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

21 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

24 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago