ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು 2021ರ ಅಕ್ಟೋಬರ್ 3ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಒಳಪಡಿಸಲಾಗಿದೆ.
ಈ ಹಿನ್ನೆಲೆ 545 ಪಿ.ಎಸ್.ಐ ನೇಮಕಾತಿ ಲಿಖಿತ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ನಡೆಸಲು ಅನುವಾಗುವಂತೆ Commissions of Inquiry Act 1952 (Central Act LX of 1952) ರ ನಿಯಮ 3ರ ಉಪ ನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಬಿ. ವೀರಪ್ಪ ರವರ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿದೆ.
ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳು ಒಳಗೊಂಡಂತೆ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಹೆಚ್ಚುವರಿ ತನಿಖೆಯನ್ನು ಮುಂದುವರೆಸಲಾಗಿರುತ್ತದೆ.
ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆಯನ್ನು ಬರೆದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ 1977ರ ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳಲ್ಲಿ ನಿಯಮ 20ರಲ್ಲಿ ನಮೂದಿಸಿರುವ ದುರ್ನಡತೆಯನ್ನು ಎಸಗಿರುವ ಕಾರಣ ಡಿಜಿಪಿ ನೇಮಕಾತಿ ಇವರ ಆದೇಶ ಸಂಖ್ಯೆ: 98/ನೇಮಕಾತಿ- 2/2020-21, ದಿನಾಂಕ: 20.06.2023ರಲ್ಲಿ ಸದರಿಯವರುಗಳನ್ನು ಪೊಲೀಸ್ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಲಾಗಿದೆ (Permanently Debarred).
545 ಪೊಲೀಸ್ ಸಬ್-ಇನ್ಸ್ಪೆಕ್ಟರ್ ನೇರ ನೇಮಕಾತಿ ಪ್ರಕಿಯೆಯಲ್ಲಿ ಬಹು ಆಯಾಮದ ಅಕ್ರಮಗಳು ನಡೆದಿರುವುದು ಕಂಡುಬಂದಿರುವುದರಿಂದ ಹಾಗೂ ಈ ಅಕ್ರಮ ಪಕ್ರರಣವು ಗಂಭೀರ ಸ್ವರೂಪದಾಗಿದ್ದು, ಸಾರ್ವಜನಿಕ ಮಹತ್ವವುಳ್ಳ ವಿಷಯವಾಗಿರುವುದರಿಂದ, ಇನ್ನುಮುಂದೆ ನಡೆಯುವ ಪೊಲೀಸ್ ನೇಮಕಾತಿಗಳು ಅತ್ಯಂತ ಪಾರದರ್ಶಕವಾಗಿ ನಡೆಸುವ ಅಗತ್ಯವಿರುವುದರಿಂದ ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆಯ ಅಗತ್ಯವಿರುವುದನ್ನು ಮನಗಂಡು, Commissions of Inquiry Act 1952ರ ನಿಯಮ 3ರ ಉಪ ನಿಯಮ 1 ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ನಿರ್ಧರಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…