Categories: ರಾಜ್ಯ

545 ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ: ರಾಜ್ಯ ಸರ್ಕಾರದಿಂದ ನ್ಯಾಯಾಂಗ ತನಿಖೆಗೆ ಆದೇಶ

ಪೊಲೀಸ್ ಸಬ್‌ ಇನ್ಸ್ ಪೆಕ್ಟರ್ (ಸಿವಿಲ್) 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು 2021ರ ಅಕ್ಟೋಬರ್ 3ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಒಳಪಡಿಸಲಾಗಿದೆ.

ಈ ಹಿನ್ನೆಲೆ 545 ಪಿ.ಎಸ್.ಐ ನೇಮಕಾತಿ ಲಿಖಿತ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ನಡೆಸಲು ಅನುವಾಗುವಂತೆ Commissions of Inquiry Act 1952 (Central Act LX of 1952) ರ ನಿಯಮ 3ರ ಉಪ ನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಬಿ. ವೀರಪ್ಪ ರವರ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿದೆ.

ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳು ಒಳಗೊಂಡಂತೆ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ. ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಹೆಚ್ಚುವರಿ ತನಿಖೆಯನ್ನು ಮುಂದುವರೆಸಲಾಗಿರುತ್ತದೆ.

ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆಯನ್ನು ಬರೆದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ 1977ರ ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳಲ್ಲಿ ನಿಯಮ 20ರಲ್ಲಿ ನಮೂದಿಸಿರುವ ದುರ್ನಡತೆಯನ್ನು ಎಸಗಿರುವ ಕಾರಣ ಡಿಜಿಪಿ ನೇಮಕಾತಿ ಇವರ ಆದೇಶ ಸಂಖ್ಯೆ: 98/ನೇಮಕಾತಿ- 2/2020-21, ದಿನಾಂಕ: 20.06.2023ರಲ್ಲಿ ಸದರಿಯವರುಗಳನ್ನು ಪೊಲೀಸ್‌ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಲಾಗಿದೆ (Permanently Debarred).

545 ಪೊಲೀಸ್ ಸಬ್-ಇನ್ಸ್‌ಪೆಕ್ಟ‌ರ್ ನೇರ ನೇಮಕಾತಿ ಪ್ರಕಿಯೆಯಲ್ಲಿ ಬಹು ಆಯಾಮದ ಅಕ್ರಮಗಳು ನಡೆದಿರುವುದು ಕಂಡುಬಂದಿರುವುದರಿಂದ ಹಾಗೂ ಈ ಅಕ್ರಮ ಪಕ್ರರಣವು ಗಂಭೀರ ಸ್ವರೂಪದಾಗಿದ್ದು, ಸಾರ್ವಜನಿಕ ಮಹತ್ವವುಳ್ಳ ವಿಷಯವಾಗಿರುವುದರಿಂದ, ಇನ್ನುಮುಂದೆ ನಡೆಯುವ ಪೊಲೀಸ್ ನೇಮಕಾತಿಗಳು ಅತ್ಯಂತ ಪಾರದರ್ಶಕವಾಗಿ ನಡೆಸುವ ಅಗತ್ಯವಿರುವುದರಿಂದ ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆಯ ಅಗತ್ಯವಿರುವುದನ್ನು ಮನಗಂಡು, Commissions of Inquiry Act 1952ರ ನಿಯಮ 3ರ ಉಪ ನಿಯಮ 1 ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ನಿರ್ಧರಿಸಿದೆ.

Ramesh Babu

Journalist

Recent Posts

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

2 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

3 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

14 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

19 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

21 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

23 hours ago