56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ- ಸಿಎಂ ಸಿದ್ದರಾಮಯ್ಯ

ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ₹1,350 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದರು.

ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು ಅವರು, 56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ.‌ ಎದೆ ಎಷ್ಟು ಇಂಚಿದೆ ಎನ್ನುವುದು ಮುಖ್ಯವಲ್ಲ, ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇರುವುದು ಮುಖ್ಯ. ಈ ಪ್ರೀತಿ ಮೋದಿಯವರಲ್ಲಿ‌ ಇಲ್ಲ ಎಂದು ತಿಳಿಸಿದರು.

ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ ₹1,350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ? ಎಂದು ಪ್ರಶ್ನೆ ಮಾಡಿದರು.

ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರವರೆಗೂ, “ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ” ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ ಎಂದರು.

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಆದರೆ ನಾವು ಬರೀ ದಾವಣಗೆರೆ ಜಿಲ್ಲೆಯಲ್ಲಿ ಒಂದೇ ದಿನ ಪೌರ ಕಾರ್ಮಿಕ ವರ್ಗಕ್ಕೆ 1,892 ಮನೆಗಳನ್ನು ವಿತರಿಸಿದ್ದೇವೆ ಎಂದು ಹೇಳಿದರು.

ಬಿಜೆಪಿಯವರ ಸುಳ್ಳುಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕುತ್ತಿಲ್ಲ. ಉಪ ಚುನಾವಣೆಯಲ್ಲಿ ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿ ನಮಗೆ ಶಕ್ತಿ ತುಂಬಿದರು. ಸಂಡೂರಿನಲ್ಲೂ ನಾವೇ ಗೆದ್ದೆವು. ಮುಂದಿನ ಚುನಾವಣೆಯಲ್ಲೂ ನಾವೇ ಮತ್ತೆ ಗೆದ್ದು ಬರ್ತೀವಿ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದರು.

ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದರು.

ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ಹೇಳಿದರು.

Ramesh Babu

Journalist

Recent Posts

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

3 minutes ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

7 minutes ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

3 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

14 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

16 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

18 hours ago