ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ₹1,350 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು ಅವರು, 56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ. ಎದೆ ಎಷ್ಟು ಇಂಚಿದೆ ಎನ್ನುವುದು ಮುಖ್ಯವಲ್ಲ, ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇರುವುದು ಮುಖ್ಯ. ಈ ಪ್ರೀತಿ ಮೋದಿಯವರಲ್ಲಿ ಇಲ್ಲ ಎಂದು ತಿಳಿಸಿದರು.
ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ ₹1,350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ? ಎಂದು ಪ್ರಶ್ನೆ ಮಾಡಿದರು.
ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರವರೆಗೂ, “ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ” ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ ಎಂದರು.
ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಆದರೆ ನಾವು ಬರೀ ದಾವಣಗೆರೆ ಜಿಲ್ಲೆಯಲ್ಲಿ ಒಂದೇ ದಿನ ಪೌರ ಕಾರ್ಮಿಕ ವರ್ಗಕ್ಕೆ 1,892 ಮನೆಗಳನ್ನು ವಿತರಿಸಿದ್ದೇವೆ ಎಂದು ಹೇಳಿದರು.
ಬಿಜೆಪಿಯವರ ಸುಳ್ಳುಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕುತ್ತಿಲ್ಲ. ಉಪ ಚುನಾವಣೆಯಲ್ಲಿ ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿ ನಮಗೆ ಶಕ್ತಿ ತುಂಬಿದರು. ಸಂಡೂರಿನಲ್ಲೂ ನಾವೇ ಗೆದ್ದೆವು. ಮುಂದಿನ ಚುನಾವಣೆಯಲ್ಲೂ ನಾವೇ ಮತ್ತೆ ಗೆದ್ದು ಬರ್ತೀವಿ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದರು.
ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದರು.
ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ಹೇಳಿದರು.
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…