56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ- ಸಿಎಂ ಸಿದ್ದರಾಮಯ್ಯ

ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ₹1,350 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದರು.

ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು ಅವರು, 56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ.‌ ಎದೆ ಎಷ್ಟು ಇಂಚಿದೆ ಎನ್ನುವುದು ಮುಖ್ಯವಲ್ಲ, ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇರುವುದು ಮುಖ್ಯ. ಈ ಪ್ರೀತಿ ಮೋದಿಯವರಲ್ಲಿ‌ ಇಲ್ಲ ಎಂದು ತಿಳಿಸಿದರು.

ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ ₹1,350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ? ಎಂದು ಪ್ರಶ್ನೆ ಮಾಡಿದರು.

ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರವರೆಗೂ, “ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ” ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ ಎಂದರು.

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಆದರೆ ನಾವು ಬರೀ ದಾವಣಗೆರೆ ಜಿಲ್ಲೆಯಲ್ಲಿ ಒಂದೇ ದಿನ ಪೌರ ಕಾರ್ಮಿಕ ವರ್ಗಕ್ಕೆ 1,892 ಮನೆಗಳನ್ನು ವಿತರಿಸಿದ್ದೇವೆ ಎಂದು ಹೇಳಿದರು.

ಬಿಜೆಪಿಯವರ ಸುಳ್ಳುಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕುತ್ತಿಲ್ಲ. ಉಪ ಚುನಾವಣೆಯಲ್ಲಿ ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿ ನಮಗೆ ಶಕ್ತಿ ತುಂಬಿದರು. ಸಂಡೂರಿನಲ್ಲೂ ನಾವೇ ಗೆದ್ದೆವು. ಮುಂದಿನ ಚುನಾವಣೆಯಲ್ಲೂ ನಾವೇ ಮತ್ತೆ ಗೆದ್ದು ಬರ್ತೀವಿ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದರು.

ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದರು.

ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ಹೇಳಿದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

7 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

8 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

9 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

10 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

17 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago