ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ₹1,350 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು ಅವರು, 56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ. ಎದೆ ಎಷ್ಟು ಇಂಚಿದೆ ಎನ್ನುವುದು ಮುಖ್ಯವಲ್ಲ, ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇರುವುದು ಮುಖ್ಯ. ಈ ಪ್ರೀತಿ ಮೋದಿಯವರಲ್ಲಿ ಇಲ್ಲ ಎಂದು ತಿಳಿಸಿದರು.
ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ ₹1,350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ? ಎಂದು ಪ್ರಶ್ನೆ ಮಾಡಿದರು.
ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರವರೆಗೂ, “ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ” ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ ಎಂದರು.
ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಆದರೆ ನಾವು ಬರೀ ದಾವಣಗೆರೆ ಜಿಲ್ಲೆಯಲ್ಲಿ ಒಂದೇ ದಿನ ಪೌರ ಕಾರ್ಮಿಕ ವರ್ಗಕ್ಕೆ 1,892 ಮನೆಗಳನ್ನು ವಿತರಿಸಿದ್ದೇವೆ ಎಂದು ಹೇಳಿದರು.
ಬಿಜೆಪಿಯವರ ಸುಳ್ಳುಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕುತ್ತಿಲ್ಲ. ಉಪ ಚುನಾವಣೆಯಲ್ಲಿ ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿ ನಮಗೆ ಶಕ್ತಿ ತುಂಬಿದರು. ಸಂಡೂರಿನಲ್ಲೂ ನಾವೇ ಗೆದ್ದೆವು. ಮುಂದಿನ ಚುನಾವಣೆಯಲ್ಲೂ ನಾವೇ ಮತ್ತೆ ಗೆದ್ದು ಬರ್ತೀವಿ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದರು.
ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದರು.
ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ಹೇಳಿದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…