56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ- ಸಿಎಂ ಸಿದ್ದರಾಮಯ್ಯ

ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ₹1,350 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದರು.

ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು ಅವರು, 56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ.‌ ಎದೆ ಎಷ್ಟು ಇಂಚಿದೆ ಎನ್ನುವುದು ಮುಖ್ಯವಲ್ಲ, ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇರುವುದು ಮುಖ್ಯ. ಈ ಪ್ರೀತಿ ಮೋದಿಯವರಲ್ಲಿ‌ ಇಲ್ಲ ಎಂದು ತಿಳಿಸಿದರು.

ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ ₹1,350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ? ಎಂದು ಪ್ರಶ್ನೆ ಮಾಡಿದರು.

ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರವರೆಗೂ, “ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ” ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ ಎಂದರು.

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಆದರೆ ನಾವು ಬರೀ ದಾವಣಗೆರೆ ಜಿಲ್ಲೆಯಲ್ಲಿ ಒಂದೇ ದಿನ ಪೌರ ಕಾರ್ಮಿಕ ವರ್ಗಕ್ಕೆ 1,892 ಮನೆಗಳನ್ನು ವಿತರಿಸಿದ್ದೇವೆ ಎಂದು ಹೇಳಿದರು.

ಬಿಜೆಪಿಯವರ ಸುಳ್ಳುಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕುತ್ತಿಲ್ಲ. ಉಪ ಚುನಾವಣೆಯಲ್ಲಿ ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿ ನಮಗೆ ಶಕ್ತಿ ತುಂಬಿದರು. ಸಂಡೂರಿನಲ್ಲೂ ನಾವೇ ಗೆದ್ದೆವು. ಮುಂದಿನ ಚುನಾವಣೆಯಲ್ಲೂ ನಾವೇ ಮತ್ತೆ ಗೆದ್ದು ಬರ್ತೀವಿ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದರು.

ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದರು.

ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ಹೇಳಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

4 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

5 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

6 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

6 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

10 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

12 hours ago