562 ಮಂದಿ ಮನೆಯಿಂದಲೇ ಮತದಾನ: ಜಿಲ್ಲಾಧಿಕಾರಿ ಆರ್.ಲತಾ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಇಂದು ನಡೆದ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 562 ಮಂದಿ ಉಪಯೋಗಿಸಿಕೊಂಡು ಮನೆಯಿಂದಲೇ ಮತದಾನ ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 133 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನ ಮತದಾರರಲ್ಲಿ 129 ಮಂದಿ ಮತದಾರರು ಮನೆಯಿಂದಲೇ ಮತದಾನ ಮಾಡಿದ್ದಾರೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 100 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನ ಮತದಾರರಲ್ಲಿ 94 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 220 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನರ ಮತದಾರರಲ್ಲಿ 215 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 130 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನ ಮತದಾರರಲ್ಲಿ 124 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ 562 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನರ ಮತದಾರರು ಮನೆಯಿಂದಲೇ ಮತದಾನ ಸೌಲಭ್ಯವನ್ನು ಉಪಯೋಗಿಸಿಕೊಂಡು ಮತದಾನ ಮಾಡಿದ್ದಾರೆ.

ಈ ಸೌಲಭ್ಯವನ್ನು ಬಳಸಿಕೊಳ್ಳಲು ಜಿಲ್ಲೆಯಾದ್ಯಂತ 583 ಕೋರಿಕೆ ಸಲ್ಲಿಸಿದ್ದು, 562 ಮಂದಿ ಈ ಸೌಲಭ್ಯದ ಸದುಪಯೋಗ ಪಡೆದಿದ್ದಾರೆ. 583ರಲ್ಲಿ 10 ಮಂದಿ ಮೃತಪಟ್ಟಿದ್ದು, 11 ಜನ ಮತದಾರರು ಅಲಭ್ಯವಿದ್ದ ಕಾರಣ ನಾಳೆ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಪುನಃ ಅವರ ಮನೆಗಳಿಗೆ ಎರಡನೆಯ ಹಾಗೂ ಕಡೆಯ ಬಾರಿಗೆ ತೆರಳಿ ಮತದಾನ ಮಾಡಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

7 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago