562 ಮಂದಿ ಮನೆಯಿಂದಲೇ ಮತದಾನ: ಜಿಲ್ಲಾಧಿಕಾರಿ ಆರ್.ಲತಾ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಇಂದು ನಡೆದ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 562 ಮಂದಿ ಉಪಯೋಗಿಸಿಕೊಂಡು ಮನೆಯಿಂದಲೇ ಮತದಾನ ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 133 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನ ಮತದಾರರಲ್ಲಿ 129 ಮಂದಿ ಮತದಾರರು ಮನೆಯಿಂದಲೇ ಮತದಾನ ಮಾಡಿದ್ದಾರೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 100 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನ ಮತದಾರರಲ್ಲಿ 94 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 220 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನರ ಮತದಾರರಲ್ಲಿ 215 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 130 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನ ಮತದಾರರಲ್ಲಿ 124 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ 562 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನರ ಮತದಾರರು ಮನೆಯಿಂದಲೇ ಮತದಾನ ಸೌಲಭ್ಯವನ್ನು ಉಪಯೋಗಿಸಿಕೊಂಡು ಮತದಾನ ಮಾಡಿದ್ದಾರೆ.

ಈ ಸೌಲಭ್ಯವನ್ನು ಬಳಸಿಕೊಳ್ಳಲು ಜಿಲ್ಲೆಯಾದ್ಯಂತ 583 ಕೋರಿಕೆ ಸಲ್ಲಿಸಿದ್ದು, 562 ಮಂದಿ ಈ ಸೌಲಭ್ಯದ ಸದುಪಯೋಗ ಪಡೆದಿದ್ದಾರೆ. 583ರಲ್ಲಿ 10 ಮಂದಿ ಮೃತಪಟ್ಟಿದ್ದು, 11 ಜನ ಮತದಾರರು ಅಲಭ್ಯವಿದ್ದ ಕಾರಣ ನಾಳೆ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಪುನಃ ಅವರ ಮನೆಗಳಿಗೆ ಎರಡನೆಯ ಹಾಗೂ ಕಡೆಯ ಬಾರಿಗೆ ತೆರಳಿ ಮತದಾನ ಮಾಡಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

15 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago