562 ಮಂದಿ ಮನೆಯಿಂದಲೇ ಮತದಾನ: ಜಿಲ್ಲಾಧಿಕಾರಿ ಆರ್.ಲತಾ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಇಂದು ನಡೆದ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 562 ಮಂದಿ ಉಪಯೋಗಿಸಿಕೊಂಡು ಮನೆಯಿಂದಲೇ ಮತದಾನ ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 133 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನ ಮತದಾರರಲ್ಲಿ 129 ಮಂದಿ ಮತದಾರರು ಮನೆಯಿಂದಲೇ ಮತದಾನ ಮಾಡಿದ್ದಾರೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 100 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನ ಮತದಾರರಲ್ಲಿ 94 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 220 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನರ ಮತದಾರರಲ್ಲಿ 215 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 130 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನ ಮತದಾರರಲ್ಲಿ 124 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ 562 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನರ ಮತದಾರರು ಮನೆಯಿಂದಲೇ ಮತದಾನ ಸೌಲಭ್ಯವನ್ನು ಉಪಯೋಗಿಸಿಕೊಂಡು ಮತದಾನ ಮಾಡಿದ್ದಾರೆ.

ಈ ಸೌಲಭ್ಯವನ್ನು ಬಳಸಿಕೊಳ್ಳಲು ಜಿಲ್ಲೆಯಾದ್ಯಂತ 583 ಕೋರಿಕೆ ಸಲ್ಲಿಸಿದ್ದು, 562 ಮಂದಿ ಈ ಸೌಲಭ್ಯದ ಸದುಪಯೋಗ ಪಡೆದಿದ್ದಾರೆ. 583ರಲ್ಲಿ 10 ಮಂದಿ ಮೃತಪಟ್ಟಿದ್ದು, 11 ಜನ ಮತದಾರರು ಅಲಭ್ಯವಿದ್ದ ಕಾರಣ ನಾಳೆ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಪುನಃ ಅವರ ಮನೆಗಳಿಗೆ ಎರಡನೆಯ ಹಾಗೂ ಕಡೆಯ ಬಾರಿಗೆ ತೆರಳಿ ಮತದಾನ ಮಾಡಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

12 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago