ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವ ವಿಚಾರದಲ್ಲಿ ನಮ್ಮ ಸರ್ಕಾರವು ಕೈಗೊಂಡಿರುವ ಮಹತ್ವದ ನಿರ್ಧಾರದ ಅನ್ವಯ ಮಾನ್ಯ ಉಚ್ಚ ನ್ಯಾಯಾಲಯದ ಆದೇಶಕ್ಕೆ ಒಳಪಟ್ಟು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಮುಂದುವರೆಸಲು ದಿ.27.04.2026ರಂದು ಸರ್ಕಾರವು ಆದೇಶಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಾನ್ಯ ಉಚ್ಚ ನ್ಯಾಯಾಲಯವು ನೀಡಿರುವ ಆದೇಶದನ್ವಯ ಶೇ.50 ಮೀಸಲಾತಿ ಪ್ರಮಾಣವನ್ನು ತಾತ್ಕಾಲಿಕವಾಗಿ ಅಳವಡಿಸಿಕೊಂಡು ಪರಿಶಿಷ್ಟ ಜಾತಿಗೆ ನಿಗದಿಪಡಿಸಿರುವ ಶೇ.15 ಮೀಸಲಾತಿಯಲ್ಲಿ ಪ್ರವರ್ಗ – ಎ, ಪ್ರವರ್ಗ- ಬಿ, ಪ್ರವರ್ಗ – ಸಿ ಗಳಿಗೆ ಒಳಮೀಸಲಾತಿಯನ್ನು ಕ್ರಮವಾಗಿ ಶೇ.5.25, 5.25, 4.5 ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ. ಪ್ರವರ್ಗ – ಸಿಗೆ ಲಭ್ಯವಾಗುವ ಹುದ್ದೆಗಳಲ್ಲಿ/ಪ್ರವೇಶಾತಿ ಸೀಟುಗಳಲ್ಲಿ ಶೇ.20ರಷ್ಟು ಹುದ್ದೆಗಳನ್ನು ಪರಿಶಿಷ್ಟ ಜಾತಿಗಳಲ್ಲಿನ 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಮೀಸಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಆರ್ಥಿಕ ಇಲಾಖೆಯು ಅನುಮೋದನೆಯನ್ನು ನೀಡಿರುವ 56,432 ಹುದ್ದೆಗಳ ನೇರ ನೇಮಕಾತಿಗಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.
ಈ ಕುರಿತಾದ ಆದೇಶದ ಪ್ರತಿಯನ್ನು ರಾಜ್ಯದ ಎಲ್ಲ ಉದ್ಯೋಗಾಕಾಂಕ್ಷಿಗಳೊಂದಿಗೆ ಹಂಚಿಕೊಳ್ಳಲು ನನಗೆ ಅತೀವ ಸಂತೋಷವಾಗುತ್ತಿದೆ. ನಮ್ಮ ಸರ್ಕಾರವು ಒಳಮೀಸಲಾತಿ ವಿಚಾರದಲ್ಲಿ ನುಡಿದಂತೆ ನಡೆದಿದ್ದು, ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ತತ್ವದೆಡೆಗಿನ ತನ್ನ ಬದ್ಧತೆಯನ್ನು ಎತ್ತಿಹಿಡಿಯುವ ಮೂಲಕ ರಾಜ್ಯದ ಜನತೆಯ ವಿಶ್ವಾಸಕ್ಕೆ ಮುಕ್ಕಾಗದಂತೆ ನಡೆದುಕೊಂಡಿದೆ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…