56,432 ಹುದ್ದೆಗಳ ನೇರ ನೇಮಕಾತಿಗಾಗಿ ತುರ್ತು ಕ್ರಮ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವ ವಿಚಾರದಲ್ಲಿ ನಮ್ಮ ಸರ್ಕಾರವು ಕೈಗೊಂಡಿರುವ ಮಹತ್ವದ ನಿರ್ಧಾರದ ಅನ್ವಯ ಮಾನ್ಯ ಉಚ್ಚ ನ್ಯಾಯಾಲಯದ ಆದೇಶಕ್ಕೆ ಒಳಪಟ್ಟು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಮುಂದುವರೆಸಲು ದಿ.27.04.2026ರಂದು ಸರ್ಕಾರವು ಆದೇಶಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾನ್ಯ ಉಚ್ಚ ನ್ಯಾಯಾಲಯವು ನೀಡಿರುವ ಆದೇಶದನ್ವಯ ಶೇ.50 ಮೀಸಲಾತಿ ಪ್ರಮಾಣವನ್ನು ತಾತ್ಕಾಲಿಕವಾಗಿ ಅಳವಡಿಸಿಕೊಂಡು ಪರಿಶಿಷ್ಟ ಜಾತಿಗೆ ನಿಗದಿಪಡಿಸಿರುವ ಶೇ.15 ಮೀಸಲಾತಿಯಲ್ಲಿ ಪ್ರವರ್ಗ – ಎ, ಪ್ರವರ್ಗ- ಬಿ, ಪ್ರವರ್ಗ – ಸಿ ಗಳಿಗೆ ಒಳಮೀಸಲಾತಿಯನ್ನು ಕ್ರಮವಾಗಿ ಶೇ.5.25, 5.25, 4.5 ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ. ಪ್ರವರ್ಗ – ಸಿಗೆ ಲಭ್ಯವಾಗುವ ಹುದ್ದೆಗಳಲ್ಲಿ/ಪ್ರವೇಶಾತಿ ಸೀಟುಗಳಲ್ಲಿ ಶೇ.20ರಷ್ಟು ಹುದ್ದೆಗಳನ್ನು ಪರಿಶಿಷ್ಟ ಜಾತಿಗಳಲ್ಲಿನ 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಮೀಸಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಆರ್ಥಿಕ ಇಲಾಖೆಯು ಅನುಮೋದನೆಯನ್ನು ನೀಡಿರುವ 56,432 ಹುದ್ದೆಗಳ ನೇರ ನೇಮಕಾತಿಗಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಈ ಕುರಿತಾದ ಆದೇಶದ ಪ್ರತಿಯನ್ನು ರಾಜ್ಯದ ಎಲ್ಲ ಉದ್ಯೋಗಾಕಾಂಕ್ಷಿಗಳೊಂದಿಗೆ ಹಂಚಿಕೊಳ್ಳಲು ನನಗೆ ಅತೀವ ಸಂತೋಷವಾಗುತ್ತಿದೆ. ನಮ್ಮ ಸರ್ಕಾರವು ಒಳಮೀಸಲಾತಿ ವಿಚಾರದಲ್ಲಿ ನುಡಿದಂತೆ ನಡೆದಿದ್ದು, ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ತತ್ವದೆಡೆಗಿನ ತನ್ನ ಬದ್ಧತೆಯನ್ನು ಎತ್ತಿಹಿಡಿಯುವ ಮೂಲಕ ರಾಜ್ಯದ ಜನತೆಯ ವಿಶ್ವಾಸಕ್ಕೆ ಮುಕ್ಕಾಗದಂತೆ ನಡೆದುಕೊಂಡಿದೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

6 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

17 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

18 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

19 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

21 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago