6 ಮತ್ತು 3 ವರ್ಷದ ಗಂಡು ಮಕ್ಕಳ(ಅಣ್ಣ-ತಮ್ಮ) ಮೇಲೆ ಮನಸೋ ಇಚ್ಛೆ ಹಲ್ಲೆ: ಸದ್ಯ ಮಕ್ಕಳ ರಕ್ಷಣೆ

3 ಮತ್ತು 6 ವರ್ಷದ ಗಂಡು ಮಕ್ಕಳ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿ ಗಾಯಪಡಿಸಿರುವ ಘಟನೆ ದೊಡ್ಡಬಳ್ಳಾಪುರ ನಗರದ ಮುತ್ಯಾಲಮ್ಮ ದೇವಸ್ಥಾನ ಸಮೀಪ ಜ.20ರಂದು ನಡೆದಿದೆ….

ಸದ್ಯ ಹಲ್ಲೆ ಮಾಡಿರುವವರು ಯಾರು ಎಂದು ತಿಳಿದುಬಂದಿರುವುದಿಲ್ಲ. ಮಕ್ಕಳ ಪೋಷಕರ ಹುಡುಕಾಟದಲ್ಲಿ ಪೊಲೀಸರು ಕಾರ್ಯನಿರತರಾಗಿದ್ದು, ಪೋಷಕರ ಪತ್ತೆಯಾದ ನಂತರ ಹಲ್ಲೆ ನಡೆಸಿದ ವ್ಯಕ್ತಿ ಯಾರು ಎಂಬುದು ತಿಳಿದುಬರಲಿದೆ…

ಎಳೆ ಮಕ್ಕಳ ಮೈ, ಕಾಲು, ಕೈ ಮೇಲೆ ಬಾಸುಂಡೆ ಬರುವ ಹಾಗೆ ಥಳಿಸಲಾಗಿದೆ… ಹಲ್ಲೆಯ ಪರಿಣಾಮ ಒಂದು ಮಗವಿಗೆ ಬಲಗೈ ಮುರಿತವಾಗಿದೆ ಎನ್ನಲಾಗಿದೆ…

ಅನಾಮಿಕನಿಂದ ಮಕ್ಕಳ ಮೇಲೆ ಹಲ್ಲೆ ಆಗಿದೆ ಎನ್ನಲಾಗಿದೆ. ಇದರಲ್ಲಿ ತಾಯಿ ಕೂಡ ಭಾಗಿಯಾಗಿರಬಹುದು ಎಂದು ಶಂಕಿಸಲಾಗಿದೆ…

ಹಲ್ಲೆಯನ್ನು ತಾಳಲಾರದೇ ಮಕ್ಕಳ ಚಿರಾಟ ಮಾಡುತ್ತಿದ್ದಾಗ ಅಕ್ಕಪಕ್ಕದ ಮನೆಯವರು ಮಕ್ಕಳ ಸಹಾಯವಾಣಿ 1098 ಹಲ್ಲೆ ಬಗ್ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮತ್ತು ಮಕ್ಕಳ ಸಹಾಯವಾಣಿ ತಂಡ.   ಹಲ್ಲೆಗೆ ಒಳಗಾದ ಮಕ್ಕಳನ್ನು ರಕ್ಷಣೆ ಮಾಡಿ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ…

ಹಲ್ಲೆ ಬಗ್ಗೆ ಮಕ್ಕಳ ಬಳಿ ವಿಚಾರಿಸಿದಾಗ, ತಾಯಿ ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆ ಹೋಗುತ್ತಾರೆ. ನಾವು ತಂದೆ ಜೊತೆ ಇಲ್ಲ. ನಮ್ಮ ಮನೆಗೆ ಆಗಾಗ ಒಬ್ಬ ಅಂಕಲ್ ಬರುತ್ತಾರೆ.. ಅವರೇ ನಮಗೆ ಥಳಿಸಿದ್ದಾರೆ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ…

ಮಕ್ಕಳ ಮೇಲೆ ಹಲ್ಲೆ ಮಾಡಿದ ಕಿರಾತಕರನ್ನು ಪೊಲೀಸರು ಪತ್ತೆ ಹಚ್ಚಿ ತಕ್ಕ‌ ಶಿಕ್ಷೆ ನೀಡುತ್ತಾರಾ….? ಕಾದು ನೋಡಬೇಕಾಗಿದೆ…

ಸದ್ಯ ನಿಖರ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…

Ramesh Babu

Journalist

Recent Posts

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

11 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

13 hours ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

21 hours ago

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟ: ಕರ್ನಾಟಕದ 8 ಮಂದಿಯು ಈ ನಾಗರಿಕ ಗೌರವಕ್ಕೆ ಭಾಜನ

2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…

1 day ago

ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ

ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…

1 day ago

ರಘುನಾಥಪುರ ಬಳಿ ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು

ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…

2 days ago