ಕೆ.ಎಸ್ ಈಶ್ವರಪ್ಪ ನವರನ್ನು ತಕ್ಷಣವೇ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಮತ್ತು 6 ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟನೆಗೊಳಿಸಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಪಕ್ಷದ ಸೂಚನೆಯನ್ನು ಕಡೆಗಣಿಸಿ ಹಾಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದೀರಿ. ಇದು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ ಆದ್ದರಿಂದ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಲಾಗುತ್ತದೆ ಮತ್ತು ಆರು (6) ವರ್ಷಗಳ ಅವಧಿಗೆ ಪಕ್ಷದಿಂದ ಹೊರಹಾಕಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆದು, ಅವರ ಪುತ್ರ ಬಿ.ವೈ.ರಾಘವೇಂದ್ರ ವಿರುದ್ಧ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
ತಮ್ಮ ಪುತ್ರನಿಗೆ ಹಾವೇರಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡಿದ್ದ ಈಶ್ವರಪ್ಪ, ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರರ ವಿರುದ್ಧ ಸಮರ ಸಾರಿದ್ದರು.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…