60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಹೆಚ್ಡಿಕೆ ಆರೋಪ‌: ಇದು ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ- ಸಿಎಂ ಸಿದ್ದರಾಮಯ್ಯ

60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ‌ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ. ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದು ಮೊದಲಲ್ಲ. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ. ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದರು.

ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಸಚಿವರಾದ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.

Ramesh Babu

Journalist

Recent Posts

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

4 hours ago

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

9 hours ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

2 days ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

2 days ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago