60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಹೆಚ್ಡಿಕೆ ಆರೋಪ‌: ಇದು ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ- ಸಿಎಂ ಸಿದ್ದರಾಮಯ್ಯ

60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ‌ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ. ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದು ಮೊದಲಲ್ಲ. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ. ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದರು.

ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಸಚಿವರಾದ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

3 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

14 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

15 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

20 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

1 day ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 days ago