60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ. ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದು ಮೊದಲಲ್ಲ. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ. ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದರು.
ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಸಚಿವರಾದ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…