625ಕ್ಕೆ 625 ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದೊಡ್ಡಬಳ್ಳಾಪುರ ಶಾಲೆಯ ರಂಜಿತಾ ಎ.ಸಿ: ತಂದೆ ರೈತ: ಜಿಲ್ಲಾಧಿಕಾರಿ ಆಗುವ ಕನಸು

ಎಸ್ಎಸ್ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಎಂಬ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ರಂಜಿತಾ ಎ.ಸಿ ಮನೆಯಲ್ಲೇ ಸಂಭ್ರಮ ಮನೆಮಾಡಿತ್ತು. ಶಿಕ್ಷಕರು, ಪೋಷಕರು, ಸ್ನೇಹಿತರು, ಸಂಬಂಧಿಕರು ಸೇರಿದಂತೆ‌ ಇತರರು ಸಿಹಿ ಸವಿದು ಸಂಭ್ರಮಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿ, ಕೊಯಿರ ಗ್ರಾಮ ಪಂಚಾಯಿತಿಯ ಅರುವನಹಳ್ಳಿ ಗ್ರಾಮದ ನಿವಾಸಿ ರಂಜಿತಾ ಎ.ಸಿ ಅವರ ತಂದೆ ಚಂದ್ರಶೇಖರ್ ರೈತರಾಗಿದ್ದು, ತಾಯಿ ಅನಿತಾ ಗೃಹಿಣಿಯಾಗಿದ್ದಾರೆ.

“ಪಬ್ಲಿಕ್ ಮಿರ್ಚಿ” ಜೊತೆ ಮಾತನಾಡಿದ ರಂಜಿತಾ ಎ.ಸಿ, “ಶಾಲೆಯ ಅವಧಿ‌ ಬಿಟ್ಟು ಪ್ರತಿನಿತ್ಯ 8 ಗಂಟೆ ಅಭ್ಯಾಸ ಮಾಡುತ್ತಿದ್ದೆ. ದಿನಕ್ಕೆ 5-6 ತಾಸು ಓದುತ್ತಿದ್ದೆ. ಶಿಕ್ಷಕರ ಪ್ರೋತ್ಸಾಹ ಸಾಕಷ್ಟಿತ್ತು. ಅಪ್ಪ-ಅಮ್ಮ ನನಗೆ ಓದಲು ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದರು. ಕಂಠಪಾಠಕ್ಕಿಂತ ಅರ್ಥ ಮಾಡಿಕೊಂಡು ಓದಿದರೆ ನೆನಪಿನಲ್ಲಿ ಇಟ್ಟುಕೊಳ್ಳುವುದು ಸುಲಭವಾಗುತ್ತದೆ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಷಯ ತೆಗೆದುಕೊಳ್ಳುತ್ತೇನೆ.‌ ಭವಿಷ್ಯದಲ್ಲಿ ಯುಪಿಎಸ್ ಸಿ ಪರೀಕ್ಷೆ ತೆಗೆದುಕೊಂಡು ಜಿಲ್ಲಾಧಿಕಾರಿ ಆಗುವ ಗುರಿ ಇಟ್ಟುಕೊಂಡಿದ್ದೇನೆ ಎಂದರು.

ರಂಜಿತಾ ಎ.ಸಿ ತಂದೆ ಚಂದ್ರಶೇಖರ್ ಮಾತನಾಡಿ, ನನ್ನ ಮಗಳ ಈ‌ ಸಾಧನೆಯಿಂದ ನನಗೆ ಬಹಳ ಸಂತಸ ತಂದಿದೆ. ಮುಂದೆ ಉನ್ನತ ವ್ಯಾಸಂಗ ಮಾಡಿಸಿ ಜಿಲ್ಲಾಧಿಕಾರಿಯನ್ನಾಗಿ ಮಾಡುತ್ತೇನೆ. ನನ್ನ ಮಗಳ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

15 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

18 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

18 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago