625ಕ್ಕೆ 625 ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದೊಡ್ಡಬಳ್ಳಾಪುರ ಶಾಲೆಯ ರಂಜಿತಾ ಎ.ಸಿ: ತಂದೆ ರೈತ: ಜಿಲ್ಲಾಧಿಕಾರಿ ಆಗುವ ಕನಸು

ಎಸ್ಎಸ್ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಎಂಬ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ರಂಜಿತಾ ಎ.ಸಿ ಮನೆಯಲ್ಲೇ ಸಂಭ್ರಮ ಮನೆಮಾಡಿತ್ತು. ಶಿಕ್ಷಕರು, ಪೋಷಕರು, ಸ್ನೇಹಿತರು, ಸಂಬಂಧಿಕರು ಸೇರಿದಂತೆ‌ ಇತರರು ಸಿಹಿ ಸವಿದು ಸಂಭ್ರಮಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿ, ಕೊಯಿರ ಗ್ರಾಮ ಪಂಚಾಯಿತಿಯ ಅರುವನಹಳ್ಳಿ ಗ್ರಾಮದ ನಿವಾಸಿ ರಂಜಿತಾ ಎ.ಸಿ ಅವರ ತಂದೆ ಚಂದ್ರಶೇಖರ್ ರೈತರಾಗಿದ್ದು, ತಾಯಿ ಅನಿತಾ ಗೃಹಿಣಿಯಾಗಿದ್ದಾರೆ.

“ಪಬ್ಲಿಕ್ ಮಿರ್ಚಿ” ಜೊತೆ ಮಾತನಾಡಿದ ರಂಜಿತಾ ಎ.ಸಿ, “ಶಾಲೆಯ ಅವಧಿ‌ ಬಿಟ್ಟು ಪ್ರತಿನಿತ್ಯ 8 ಗಂಟೆ ಅಭ್ಯಾಸ ಮಾಡುತ್ತಿದ್ದೆ. ದಿನಕ್ಕೆ 5-6 ತಾಸು ಓದುತ್ತಿದ್ದೆ. ಶಿಕ್ಷಕರ ಪ್ರೋತ್ಸಾಹ ಸಾಕಷ್ಟಿತ್ತು. ಅಪ್ಪ-ಅಮ್ಮ ನನಗೆ ಓದಲು ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದರು. ಕಂಠಪಾಠಕ್ಕಿಂತ ಅರ್ಥ ಮಾಡಿಕೊಂಡು ಓದಿದರೆ ನೆನಪಿನಲ್ಲಿ ಇಟ್ಟುಕೊಳ್ಳುವುದು ಸುಲಭವಾಗುತ್ತದೆ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಷಯ ತೆಗೆದುಕೊಳ್ಳುತ್ತೇನೆ.‌ ಭವಿಷ್ಯದಲ್ಲಿ ಯುಪಿಎಸ್ ಸಿ ಪರೀಕ್ಷೆ ತೆಗೆದುಕೊಂಡು ಜಿಲ್ಲಾಧಿಕಾರಿ ಆಗುವ ಗುರಿ ಇಟ್ಟುಕೊಂಡಿದ್ದೇನೆ ಎಂದರು.

ರಂಜಿತಾ ಎ.ಸಿ ತಂದೆ ಚಂದ್ರಶೇಖರ್ ಮಾತನಾಡಿ, ನನ್ನ ಮಗಳ ಈ‌ ಸಾಧನೆಯಿಂದ ನನಗೆ ಬಹಳ ಸಂತಸ ತಂದಿದೆ. ಮುಂದೆ ಉನ್ನತ ವ್ಯಾಸಂಗ ಮಾಡಿಸಿ ಜಿಲ್ಲಾಧಿಕಾರಿಯನ್ನಾಗಿ ಮಾಡುತ್ತೇನೆ. ನನ್ನ ಮಗಳ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದರು.

Ramesh Babu

Journalist

Recent Posts

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

20 minutes ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 hour ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

14 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

15 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

17 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

21 hours ago