625ಕ್ಕೆ 625 ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದೊಡ್ಡಬಳ್ಳಾಪುರ ಶಾಲೆಯ ರಂಜಿತಾ ಎ.ಸಿ: ತಂದೆ ರೈತ: ಜಿಲ್ಲಾಧಿಕಾರಿ ಆಗುವ ಕನಸು

ಎಸ್ಎಸ್ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಎಂಬ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ರಂಜಿತಾ ಎ.ಸಿ ಮನೆಯಲ್ಲೇ ಸಂಭ್ರಮ ಮನೆಮಾಡಿತ್ತು. ಶಿಕ್ಷಕರು, ಪೋಷಕರು, ಸ್ನೇಹಿತರು, ಸಂಬಂಧಿಕರು ಸೇರಿದಂತೆ‌ ಇತರರು ಸಿಹಿ ಸವಿದು ಸಂಭ್ರಮಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿ, ಕೊಯಿರ ಗ್ರಾಮ ಪಂಚಾಯಿತಿಯ ಅರುವನಹಳ್ಳಿ ಗ್ರಾಮದ ನಿವಾಸಿ ರಂಜಿತಾ ಎ.ಸಿ ಅವರ ತಂದೆ ಚಂದ್ರಶೇಖರ್ ರೈತರಾಗಿದ್ದು, ತಾಯಿ ಅನಿತಾ ಗೃಹಿಣಿಯಾಗಿದ್ದಾರೆ.

“ಪಬ್ಲಿಕ್ ಮಿರ್ಚಿ” ಜೊತೆ ಮಾತನಾಡಿದ ರಂಜಿತಾ ಎ.ಸಿ, “ಶಾಲೆಯ ಅವಧಿ‌ ಬಿಟ್ಟು ಪ್ರತಿನಿತ್ಯ 8 ಗಂಟೆ ಅಭ್ಯಾಸ ಮಾಡುತ್ತಿದ್ದೆ. ದಿನಕ್ಕೆ 5-6 ತಾಸು ಓದುತ್ತಿದ್ದೆ. ಶಿಕ್ಷಕರ ಪ್ರೋತ್ಸಾಹ ಸಾಕಷ್ಟಿತ್ತು. ಅಪ್ಪ-ಅಮ್ಮ ನನಗೆ ಓದಲು ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದರು. ಕಂಠಪಾಠಕ್ಕಿಂತ ಅರ್ಥ ಮಾಡಿಕೊಂಡು ಓದಿದರೆ ನೆನಪಿನಲ್ಲಿ ಇಟ್ಟುಕೊಳ್ಳುವುದು ಸುಲಭವಾಗುತ್ತದೆ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಷಯ ತೆಗೆದುಕೊಳ್ಳುತ್ತೇನೆ.‌ ಭವಿಷ್ಯದಲ್ಲಿ ಯುಪಿಎಸ್ ಸಿ ಪರೀಕ್ಷೆ ತೆಗೆದುಕೊಂಡು ಜಿಲ್ಲಾಧಿಕಾರಿ ಆಗುವ ಗುರಿ ಇಟ್ಟುಕೊಂಡಿದ್ದೇನೆ ಎಂದರು.

ರಂಜಿತಾ ಎ.ಸಿ ತಂದೆ ಚಂದ್ರಶೇಖರ್ ಮಾತನಾಡಿ, ನನ್ನ ಮಗಳ ಈ‌ ಸಾಧನೆಯಿಂದ ನನಗೆ ಬಹಳ ಸಂತಸ ತಂದಿದೆ. ಮುಂದೆ ಉನ್ನತ ವ್ಯಾಸಂಗ ಮಾಡಿಸಿ ಜಿಲ್ಲಾಧಿಕಾರಿಯನ್ನಾಗಿ ಮಾಡುತ್ತೇನೆ. ನನ್ನ ಮಗಳ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದರು.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

5 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

6 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

17 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

17 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

17 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

1 day ago