625ಕ್ಕೆ 625 ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದೊಡ್ಡಬಳ್ಳಾಪುರ ಶಾಲೆಯ ರಂಜಿತಾ ಎ.ಸಿ: ತಂದೆ ರೈತ: ಜಿಲ್ಲಾಧಿಕಾರಿ ಆಗುವ ಕನಸು

ಎಸ್ಎಸ್ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಎಂಬ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ರಂಜಿತಾ ಎ.ಸಿ ಮನೆಯಲ್ಲೇ ಸಂಭ್ರಮ ಮನೆಮಾಡಿತ್ತು. ಶಿಕ್ಷಕರು, ಪೋಷಕರು, ಸ್ನೇಹಿತರು, ಸಂಬಂಧಿಕರು ಸೇರಿದಂತೆ‌ ಇತರರು ಸಿಹಿ ಸವಿದು ಸಂಭ್ರಮಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿ, ಕೊಯಿರ ಗ್ರಾಮ ಪಂಚಾಯಿತಿಯ ಅರುವನಹಳ್ಳಿ ಗ್ರಾಮದ ನಿವಾಸಿ ರಂಜಿತಾ ಎ.ಸಿ ಅವರ ತಂದೆ ಚಂದ್ರಶೇಖರ್ ರೈತರಾಗಿದ್ದು, ತಾಯಿ ಅನಿತಾ ಗೃಹಿಣಿಯಾಗಿದ್ದಾರೆ.

“ಪಬ್ಲಿಕ್ ಮಿರ್ಚಿ” ಜೊತೆ ಮಾತನಾಡಿದ ರಂಜಿತಾ ಎ.ಸಿ, “ಶಾಲೆಯ ಅವಧಿ‌ ಬಿಟ್ಟು ಪ್ರತಿನಿತ್ಯ 8 ಗಂಟೆ ಅಭ್ಯಾಸ ಮಾಡುತ್ತಿದ್ದೆ. ದಿನಕ್ಕೆ 5-6 ತಾಸು ಓದುತ್ತಿದ್ದೆ. ಶಿಕ್ಷಕರ ಪ್ರೋತ್ಸಾಹ ಸಾಕಷ್ಟಿತ್ತು. ಅಪ್ಪ-ಅಮ್ಮ ನನಗೆ ಓದಲು ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದರು. ಕಂಠಪಾಠಕ್ಕಿಂತ ಅರ್ಥ ಮಾಡಿಕೊಂಡು ಓದಿದರೆ ನೆನಪಿನಲ್ಲಿ ಇಟ್ಟುಕೊಳ್ಳುವುದು ಸುಲಭವಾಗುತ್ತದೆ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಷಯ ತೆಗೆದುಕೊಳ್ಳುತ್ತೇನೆ.‌ ಭವಿಷ್ಯದಲ್ಲಿ ಯುಪಿಎಸ್ ಸಿ ಪರೀಕ್ಷೆ ತೆಗೆದುಕೊಂಡು ಜಿಲ್ಲಾಧಿಕಾರಿ ಆಗುವ ಗುರಿ ಇಟ್ಟುಕೊಂಡಿದ್ದೇನೆ ಎಂದರು.

ರಂಜಿತಾ ಎ.ಸಿ ತಂದೆ ಚಂದ್ರಶೇಖರ್ ಮಾತನಾಡಿ, ನನ್ನ ಮಗಳ ಈ‌ ಸಾಧನೆಯಿಂದ ನನಗೆ ಬಹಳ ಸಂತಸ ತಂದಿದೆ. ಮುಂದೆ ಉನ್ನತ ವ್ಯಾಸಂಗ ಮಾಡಿಸಿ ಜಿಲ್ಲಾಧಿಕಾರಿಯನ್ನಾಗಿ ಮಾಡುತ್ತೇನೆ. ನನ್ನ ಮಗಳ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

11 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

14 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago