ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಎಂಬ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ರಂಜಿತಾ ಎ.ಸಿ ಮನೆಯಲ್ಲೇ ಸಂಭ್ರಮ ಮನೆಮಾಡಿತ್ತು. ಶಿಕ್ಷಕರು, ಪೋಷಕರು, ಸ್ನೇಹಿತರು, ಸಂಬಂಧಿಕರು ಸೇರಿದಂತೆ ಇತರರು ಸಿಹಿ ಸವಿದು ಸಂಭ್ರಮಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿ, ಕೊಯಿರ ಗ್ರಾಮ ಪಂಚಾಯಿತಿಯ ಅರುವನಹಳ್ಳಿ ಗ್ರಾಮದ ನಿವಾಸಿ ರಂಜಿತಾ ಎ.ಸಿ ಅವರ ತಂದೆ ಚಂದ್ರಶೇಖರ್ ರೈತರಾಗಿದ್ದು, ತಾಯಿ ಅನಿತಾ ಗೃಹಿಣಿಯಾಗಿದ್ದಾರೆ.
“ಪಬ್ಲಿಕ್ ಮಿರ್ಚಿ” ಜೊತೆ ಮಾತನಾಡಿದ ರಂಜಿತಾ ಎ.ಸಿ, “ಶಾಲೆಯ ಅವಧಿ ಬಿಟ್ಟು ಪ್ರತಿನಿತ್ಯ 8 ಗಂಟೆ ಅಭ್ಯಾಸ ಮಾಡುತ್ತಿದ್ದೆ. ದಿನಕ್ಕೆ 5-6 ತಾಸು ಓದುತ್ತಿದ್ದೆ. ಶಿಕ್ಷಕರ ಪ್ರೋತ್ಸಾಹ ಸಾಕಷ್ಟಿತ್ತು. ಅಪ್ಪ-ಅಮ್ಮ ನನಗೆ ಓದಲು ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದರು. ಕಂಠಪಾಠಕ್ಕಿಂತ ಅರ್ಥ ಮಾಡಿಕೊಂಡು ಓದಿದರೆ ನೆನಪಿನಲ್ಲಿ ಇಟ್ಟುಕೊಳ್ಳುವುದು ಸುಲಭವಾಗುತ್ತದೆ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಷಯ ತೆಗೆದುಕೊಳ್ಳುತ್ತೇನೆ. ಭವಿಷ್ಯದಲ್ಲಿ ಯುಪಿಎಸ್ ಸಿ ಪರೀಕ್ಷೆ ತೆಗೆದುಕೊಂಡು ಜಿಲ್ಲಾಧಿಕಾರಿ ಆಗುವ ಗುರಿ ಇಟ್ಟುಕೊಂಡಿದ್ದೇನೆ ಎಂದರು.
ರಂಜಿತಾ ಎ.ಸಿ ತಂದೆ ಚಂದ್ರಶೇಖರ್ ಮಾತನಾಡಿ, ನನ್ನ ಮಗಳ ಈ ಸಾಧನೆಯಿಂದ ನನಗೆ ಬಹಳ ಸಂತಸ ತಂದಿದೆ. ಮುಂದೆ ಉನ್ನತ ವ್ಯಾಸಂಗ ಮಾಡಿಸಿ ಜಿಲ್ಲಾಧಿಕಾರಿಯನ್ನಾಗಿ ಮಾಡುತ್ತೇನೆ. ನನ್ನ ಮಗಳ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದರು.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…