ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಎಂಬ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ರಂಜಿತಾ ಎ.ಸಿ ಮನೆಯಲ್ಲೇ ಸಂಭ್ರಮ ಮನೆಮಾಡಿತ್ತು. ಶಿಕ್ಷಕರು, ಪೋಷಕರು, ಸ್ನೇಹಿತರು, ಸಂಬಂಧಿಕರು ಸೇರಿದಂತೆ ಇತರರು ಸಿಹಿ ಸವಿದು ಸಂಭ್ರಮಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿ, ಕೊಯಿರ ಗ್ರಾಮ ಪಂಚಾಯಿತಿಯ ಅರುವನಹಳ್ಳಿ ಗ್ರಾಮದ ನಿವಾಸಿ ರಂಜಿತಾ ಎ.ಸಿ ಅವರ ತಂದೆ ಚಂದ್ರಶೇಖರ್ ರೈತರಾಗಿದ್ದು, ತಾಯಿ ಅನಿತಾ ಗೃಹಿಣಿಯಾಗಿದ್ದಾರೆ.
“ಪಬ್ಲಿಕ್ ಮಿರ್ಚಿ” ಜೊತೆ ಮಾತನಾಡಿದ ರಂಜಿತಾ ಎ.ಸಿ, “ಶಾಲೆಯ ಅವಧಿ ಬಿಟ್ಟು ಪ್ರತಿನಿತ್ಯ 8 ಗಂಟೆ ಅಭ್ಯಾಸ ಮಾಡುತ್ತಿದ್ದೆ. ದಿನಕ್ಕೆ 5-6 ತಾಸು ಓದುತ್ತಿದ್ದೆ. ಶಿಕ್ಷಕರ ಪ್ರೋತ್ಸಾಹ ಸಾಕಷ್ಟಿತ್ತು. ಅಪ್ಪ-ಅಮ್ಮ ನನಗೆ ಓದಲು ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದರು. ಕಂಠಪಾಠಕ್ಕಿಂತ ಅರ್ಥ ಮಾಡಿಕೊಂಡು ಓದಿದರೆ ನೆನಪಿನಲ್ಲಿ ಇಟ್ಟುಕೊಳ್ಳುವುದು ಸುಲಭವಾಗುತ್ತದೆ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಷಯ ತೆಗೆದುಕೊಳ್ಳುತ್ತೇನೆ. ಭವಿಷ್ಯದಲ್ಲಿ ಯುಪಿಎಸ್ ಸಿ ಪರೀಕ್ಷೆ ತೆಗೆದುಕೊಂಡು ಜಿಲ್ಲಾಧಿಕಾರಿ ಆಗುವ ಗುರಿ ಇಟ್ಟುಕೊಂಡಿದ್ದೇನೆ ಎಂದರು.
ರಂಜಿತಾ ಎ.ಸಿ ತಂದೆ ಚಂದ್ರಶೇಖರ್ ಮಾತನಾಡಿ, ನನ್ನ ಮಗಳ ಈ ಸಾಧನೆಯಿಂದ ನನಗೆ ಬಹಳ ಸಂತಸ ತಂದಿದೆ. ಮುಂದೆ ಉನ್ನತ ವ್ಯಾಸಂಗ ಮಾಡಿಸಿ ಜಿಲ್ಲಾಧಿಕಾರಿಯನ್ನಾಗಿ ಮಾಡುತ್ತೇನೆ. ನನ್ನ ಮಗಳ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…