ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಎಂಬ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ರಂಜಿತಾ ಎ.ಸಿ ಮನೆಯಲ್ಲೇ ಸಂಭ್ರಮ ಮನೆಮಾಡಿತ್ತು. ಶಿಕ್ಷಕರು, ಪೋಷಕರು, ಸ್ನೇಹಿತರು, ಸಂಬಂಧಿಕರು ಸೇರಿದಂತೆ ಇತರರು ಸಿಹಿ ಸವಿದು ಸಂಭ್ರಮಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿ, ಕೊಯಿರ ಗ್ರಾಮ ಪಂಚಾಯಿತಿಯ ಅರುವನಹಳ್ಳಿ ಗ್ರಾಮದ ನಿವಾಸಿ ರಂಜಿತಾ ಎ.ಸಿ ಅವರ ತಂದೆ ಚಂದ್ರಶೇಖರ್ ರೈತರಾಗಿದ್ದು, ತಾಯಿ ಅನಿತಾ ಗೃಹಿಣಿಯಾಗಿದ್ದಾರೆ.
“ಪಬ್ಲಿಕ್ ಮಿರ್ಚಿ” ಜೊತೆ ಮಾತನಾಡಿದ ರಂಜಿತಾ ಎ.ಸಿ, “ಶಾಲೆಯ ಅವಧಿ ಬಿಟ್ಟು ಪ್ರತಿನಿತ್ಯ 8 ಗಂಟೆ ಅಭ್ಯಾಸ ಮಾಡುತ್ತಿದ್ದೆ. ದಿನಕ್ಕೆ 5-6 ತಾಸು ಓದುತ್ತಿದ್ದೆ. ಶಿಕ್ಷಕರ ಪ್ರೋತ್ಸಾಹ ಸಾಕಷ್ಟಿತ್ತು. ಅಪ್ಪ-ಅಮ್ಮ ನನಗೆ ಓದಲು ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದರು. ಕಂಠಪಾಠಕ್ಕಿಂತ ಅರ್ಥ ಮಾಡಿಕೊಂಡು ಓದಿದರೆ ನೆನಪಿನಲ್ಲಿ ಇಟ್ಟುಕೊಳ್ಳುವುದು ಸುಲಭವಾಗುತ್ತದೆ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಷಯ ತೆಗೆದುಕೊಳ್ಳುತ್ತೇನೆ. ಭವಿಷ್ಯದಲ್ಲಿ ಯುಪಿಎಸ್ ಸಿ ಪರೀಕ್ಷೆ ತೆಗೆದುಕೊಂಡು ಜಿಲ್ಲಾಧಿಕಾರಿ ಆಗುವ ಗುರಿ ಇಟ್ಟುಕೊಂಡಿದ್ದೇನೆ ಎಂದರು.
ರಂಜಿತಾ ಎ.ಸಿ ತಂದೆ ಚಂದ್ರಶೇಖರ್ ಮಾತನಾಡಿ, ನನ್ನ ಮಗಳ ಈ ಸಾಧನೆಯಿಂದ ನನಗೆ ಬಹಳ ಸಂತಸ ತಂದಿದೆ. ಮುಂದೆ ಉನ್ನತ ವ್ಯಾಸಂಗ ಮಾಡಿಸಿ ಜಿಲ್ಲಾಧಿಕಾರಿಯನ್ನಾಗಿ ಮಾಡುತ್ತೇನೆ. ನನ್ನ ಮಗಳ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದರು.
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…
ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…