65 ಪ್ರಕರಣಗಳಲ್ಲಿ114 ಆರೋಪಿಗಳ ಬಂಧನ: 83,43,657 ಮೌಲ್ಯದ ಸ್ವತ್ತು ವಾರಸುದಾರರಿಗೆ ವಾಪಸ್

ತಮ್ಮದೇ ಏರಿಯಾದ ಮನೆಯೊಂದಕ್ಕೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನ ಖತರ್ನಾಕ್ ಖದೀಮರು ಕಳ್ಳತನ ಮಾಡಿದ್ದಾರೆ.

ಮನೆಗಳ್ಳತನ ಆಗಿದ್ದಕ್ಕೆ ಮಾಲೀಕರು ಪೊಲೀಸರಿಗೆ ದೂರನ್ನ ಸಹ ನೀಡಿದ್ದರು, ಈ ವೇಳೆ ಅದೇ ಏರಿಯಾದ ಇಬ್ಬರು ಯುವಕರು ಪ್ರಕರಣ ಯಾಕೆ ಬೇಧಿಸಿಲ್ಲ ಅಂತಾ ಪದೇ ಪದೇ ಪೊಲೀಸರ ಮೇಲೆ ಒತ್ತಡ ಹಾಕೋಕೆ ಶುರು ಮಾಡಿದ್ದಾರೆ. ಈ ವೇಳೆ ಅನುಮಾನಗೊಂಡ ಪೊಲೀಸರು ಇಬ್ಬರನ್ನ ವಿಚಾರಣೆಗೆ ಒಳಪಡಿಸಿದ್ದಾರೆ, ಆವಾಗ ಪ್ರಕರಣದ ಅಸಲಿಯತ್ ಬೆಳಕಿಗೆ ಬಂದಿದೆ.

2024 ರ ಡಿಸೆಂಬರ್ 12 ರಂದು ಕಲಬುರಗಿ ನಗರದ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯ ತಾಜ್ ನಗರದಲ್ಲಿ ಮಹ್ಮದ್ ಅಬ್ದುಲ್ ನಬೀ ಎಂಬುವರು ಕುಟುಂಬ ಸಮೇತ ಹಜ್ ಯಾತ್ರೆಗೆ ತೆರಳಿದ್ದರು. ಈ ವೇಳೆ ಸಂಬಂಧಿ ವಾಸಿಮ್ ಎಂಬಾತನಿಗೆ ಮನೆ ಬೀಗ ಕೊಟ್ಟು ಮನೆ ನೋಡಿಕೊಳ್ಳಲು ಹೇಳಿದ್ದರು. ಈ ವೇಳೆ ವಾಸಿಮ್ ತನ್ನ ಸ್ನೇಹಿತನಾದ ಶಾದಾಬ್ ಎಂಬಾತನ ಜೊತೆಗೂಡಿ ಮಹ್ಮದ್ ಅಬ್ದುಲ್ ನಬೀ ಮನೆ ಸ್ವಚ್ಛ ಮಾಡುವ ನೆಪದಲ್ಲಿ ಮನೆಯಲ್ಲಿನ ನಗದು ಹಣ ಮತ್ತು ಚಿನ್ನಾಭರಣಗಳನ್ನ ದೋಚಿದ್ದರು.
ಮಾರನೇ ದಿನೇ ಹಜ್ ಯಾತ್ರೆ ಮುಗಿಸಿಕೊಂಡು ಮನೆಗೆ ಬಂದಾಗ ಕಳ್ಳತನವಾಗಿರೋದನ್ನ ಕಂಡು ಅಬ್ದುಲ್ ನಬೀ ಚೌಕ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ವಾಸಿಮ್ ಮತ್ತು ಶಾದಾಬ್ ಇಬ್ಬರು ಸೇರಿಕೊಂಡು ಮನೆಗಳ್ಳತನ ಪ್ರಕರಣ ಭೇದಿಸಲು ಯಾಕೆ ವಿಳಂಬ ಮಾಡ್ತಿದ್ದಿರಿ, ಬೇಗ ಆರೋಪಿಗಳನ್ನ ಬಂಧಿಸಿ ರಿಕವರಿ ಮಾಡಿ ಅಂತಾ ಪದೇ ಪದೇ ಒತ್ತಡ ಹಾಕಿದ್ದಾರೆ. ಈ ವೇಳೆ ಅನುಮಾನಗೊಂಡ ಚೌಕ್ ಇನ್ಸ್ಪೆಕ್ಟರ್ ರಾಘವೇಂದ್ರ, ವಾಸಿಮ್ ಮತ್ತು ಶಾದಾಬ್‌ರನ್ನ ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಾವೇ ಅಬ್ದುಲ್ ನಬೀ ಮನೆಗಳ್ಳತನ ಮಾಡಿರೋದಾಗಿ ಒಪ್ಪಿಕೊಂಡಿದ್ದಾರೆ.

ಮನೆಗಳ್ಳತನ ಸೇರಿದಂತೆ ಇತರೆ 65 ಪ್ರಕರಣಗಳಲ್ಲಿ 114 ಆರೋಪಿಗಳನ್ನು ಬಂಧಿಸಿ ಸದರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಒಟ್ಟು 936 ಗ್ರಾಂ ಬಂಗಾರ, 1908 ಗ್ರಾಂ ಬೆಳ್ಳಿ, ನಗದು ಹಣ ರೂ ₹ 3,39,650/-  ಹಾಗೂ ಇತರೆ ಬೆಲೆ ಬಾಳುವ ವಸ್ತುಗಳು ₹ 25,54,500 ಸೇರಿದಂತೆ ಒಟ್ಟು ₹ 83,43,657/- ಮೌಲ್ಯದ ಸ್ವತ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಯಿತು.

ಈ ಸಂದರ್ಭದಲ್ಲಿ ಪ್ರಕರಣಗಳನ್ನು ಭೇದಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ ಅವರು ಪ್ರಸಂಶನಾ ಪತ್ರ ನೀಡಿ ಶ್ಲಾಘಿಸಿದ್ದಾರೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

11 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago