65 ಪ್ರಕರಣಗಳಲ್ಲಿ114 ಆರೋಪಿಗಳ ಬಂಧನ: 83,43,657 ಮೌಲ್ಯದ ಸ್ವತ್ತು ವಾರಸುದಾರರಿಗೆ ವಾಪಸ್

ತಮ್ಮದೇ ಏರಿಯಾದ ಮನೆಯೊಂದಕ್ಕೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನ ಖತರ್ನಾಕ್ ಖದೀಮರು ಕಳ್ಳತನ ಮಾಡಿದ್ದಾರೆ.

ಮನೆಗಳ್ಳತನ ಆಗಿದ್ದಕ್ಕೆ ಮಾಲೀಕರು ಪೊಲೀಸರಿಗೆ ದೂರನ್ನ ಸಹ ನೀಡಿದ್ದರು, ಈ ವೇಳೆ ಅದೇ ಏರಿಯಾದ ಇಬ್ಬರು ಯುವಕರು ಪ್ರಕರಣ ಯಾಕೆ ಬೇಧಿಸಿಲ್ಲ ಅಂತಾ ಪದೇ ಪದೇ ಪೊಲೀಸರ ಮೇಲೆ ಒತ್ತಡ ಹಾಕೋಕೆ ಶುರು ಮಾಡಿದ್ದಾರೆ. ಈ ವೇಳೆ ಅನುಮಾನಗೊಂಡ ಪೊಲೀಸರು ಇಬ್ಬರನ್ನ ವಿಚಾರಣೆಗೆ ಒಳಪಡಿಸಿದ್ದಾರೆ, ಆವಾಗ ಪ್ರಕರಣದ ಅಸಲಿಯತ್ ಬೆಳಕಿಗೆ ಬಂದಿದೆ.

2024 ರ ಡಿಸೆಂಬರ್ 12 ರಂದು ಕಲಬುರಗಿ ನಗರದ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯ ತಾಜ್ ನಗರದಲ್ಲಿ ಮಹ್ಮದ್ ಅಬ್ದುಲ್ ನಬೀ ಎಂಬುವರು ಕುಟುಂಬ ಸಮೇತ ಹಜ್ ಯಾತ್ರೆಗೆ ತೆರಳಿದ್ದರು. ಈ ವೇಳೆ ಸಂಬಂಧಿ ವಾಸಿಮ್ ಎಂಬಾತನಿಗೆ ಮನೆ ಬೀಗ ಕೊಟ್ಟು ಮನೆ ನೋಡಿಕೊಳ್ಳಲು ಹೇಳಿದ್ದರು. ಈ ವೇಳೆ ವಾಸಿಮ್ ತನ್ನ ಸ್ನೇಹಿತನಾದ ಶಾದಾಬ್ ಎಂಬಾತನ ಜೊತೆಗೂಡಿ ಮಹ್ಮದ್ ಅಬ್ದುಲ್ ನಬೀ ಮನೆ ಸ್ವಚ್ಛ ಮಾಡುವ ನೆಪದಲ್ಲಿ ಮನೆಯಲ್ಲಿನ ನಗದು ಹಣ ಮತ್ತು ಚಿನ್ನಾಭರಣಗಳನ್ನ ದೋಚಿದ್ದರು.
ಮಾರನೇ ದಿನೇ ಹಜ್ ಯಾತ್ರೆ ಮುಗಿಸಿಕೊಂಡು ಮನೆಗೆ ಬಂದಾಗ ಕಳ್ಳತನವಾಗಿರೋದನ್ನ ಕಂಡು ಅಬ್ದುಲ್ ನಬೀ ಚೌಕ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ವಾಸಿಮ್ ಮತ್ತು ಶಾದಾಬ್ ಇಬ್ಬರು ಸೇರಿಕೊಂಡು ಮನೆಗಳ್ಳತನ ಪ್ರಕರಣ ಭೇದಿಸಲು ಯಾಕೆ ವಿಳಂಬ ಮಾಡ್ತಿದ್ದಿರಿ, ಬೇಗ ಆರೋಪಿಗಳನ್ನ ಬಂಧಿಸಿ ರಿಕವರಿ ಮಾಡಿ ಅಂತಾ ಪದೇ ಪದೇ ಒತ್ತಡ ಹಾಕಿದ್ದಾರೆ. ಈ ವೇಳೆ ಅನುಮಾನಗೊಂಡ ಚೌಕ್ ಇನ್ಸ್ಪೆಕ್ಟರ್ ರಾಘವೇಂದ್ರ, ವಾಸಿಮ್ ಮತ್ತು ಶಾದಾಬ್‌ರನ್ನ ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಾವೇ ಅಬ್ದುಲ್ ನಬೀ ಮನೆಗಳ್ಳತನ ಮಾಡಿರೋದಾಗಿ ಒಪ್ಪಿಕೊಂಡಿದ್ದಾರೆ.

ಮನೆಗಳ್ಳತನ ಸೇರಿದಂತೆ ಇತರೆ 65 ಪ್ರಕರಣಗಳಲ್ಲಿ 114 ಆರೋಪಿಗಳನ್ನು ಬಂಧಿಸಿ ಸದರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಒಟ್ಟು 936 ಗ್ರಾಂ ಬಂಗಾರ, 1908 ಗ್ರಾಂ ಬೆಳ್ಳಿ, ನಗದು ಹಣ ರೂ ₹ 3,39,650/-  ಹಾಗೂ ಇತರೆ ಬೆಲೆ ಬಾಳುವ ವಸ್ತುಗಳು ₹ 25,54,500 ಸೇರಿದಂತೆ ಒಟ್ಟು ₹ 83,43,657/- ಮೌಲ್ಯದ ಸ್ವತ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಯಿತು.

ಈ ಸಂದರ್ಭದಲ್ಲಿ ಪ್ರಕರಣಗಳನ್ನು ಭೇದಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ ಅವರು ಪ್ರಸಂಶನಾ ಪತ್ರ ನೀಡಿ ಶ್ಲಾಘಿಸಿದ್ದಾರೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

5 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

6 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

10 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

11 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

16 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

18 hours ago